Featured

ಜುಲೈ 31 ರೊಳಗೆ ಆಧಾರ್ ದೃಡೀಕರಣ (ಇ-ಕೆವೈಸಿ) ಮಾಡಿಸದಿದ್ದರೆ ರದ್ದಾಗಲಿದೆ ನಿಮ್ಮ ರೇಷನ್ ಕಾರ್ಡ್ -Vishwanews24

ಬೆಂಗಳೂರು:ಜುಲೈ 31 ರೊಳಗೆ ರೇಷನ್ ಕಾರ್ಡ್ ಅನ್ನು ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ಪಡಿತರ ಸಿಗುವುದಿಲ್ಲ.

ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರು ಜುಲೈ 31 ರೊಳಗೆ ಆಧಾರ್ ದೃಡೀಕರಣ(ಇ-ಕೆವೈಸಿ) ಮಾಡಿಸಬೇಕಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ಇ-ಕೆವೈಸಿ ಮಾಡಿಸಬೇಕಿದೆ. ಇದು ಸಂಪೂರ್ಣ ಉಚಿತವಾಗಿದ್ದು, ಯಾರು ಹಣ ಪಾವತಿಸುವಂತಿಲ್ಲ. ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು. ತಾವು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ ದೃಢೀಕರಣದೊಂದಿಗೆ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.

ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ಬಯೊಮೆಟ್ರಿಕ್ ನೀಡುವುದು ಕಡ್ಡಾಯವಾಗಿದೆ. ಬಯೋಮೆಟ್ರಿಕ್ ನೀಡಿದವರಿಗೆ ಮಾತ್ರ ಪಡಿತರವನ್ನು ವಿತರಿಸಲಾಗುತ್ತದೆ ಎಂದು ಹೇಳಲಾಗಿದೆ.

ಜುಲೈ 31 ರೊಳಗೆ ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲರೂ ನ್ಯಾಯಬೆಲೆ ಅಂಗಡಿಗೆ ಹೋಗಿ ದೃಢೀಕರಣ ನೀಡಬೇಕಿದೆ. ಕೆವೈಸಿ ಪ್ರಕ್ರಿಯೆ ಮುಗಿದ ಬಳಿಕ ಪಡಿತರ ಚೀಟಿಯಿಂದ ತೆಗೆದುಹಾಕಲು ಉಳಿದವರಿಗೆ ಮಾತ್ರ ಪಡಿತರ ವಿತರಿಸಲಾಗುವುದು.

ಇ-ಕೆವೈಸಿ ಯಾಕೆ ಬೇಕು? 

ಹಲವು ವರ್ಷಗಳ ಹಿಂದೆಯೇ ಪಡಿತರ ಸದಸ್ಯರ ಆಧಾರ್‌ ನಂಬರ್‌ ಲಿಂಕ್‌ ಮಾಡಲಾಗಿದೆ. ಇದರ ಆಧಾರದ ಮೇಲೆ ಆಹಾರ ಧಾನ್ಯ ಪೂರೈಕೆಯಾಗುತ್ತಿದೆ. ಆದರೆ, ಮೃತರ, ಪರಸ್ಥಳದಲ್ಲಿ ನೆಲೆಸಿದವರ, ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೀಗೆ ನಾನಾ ರೀತಿಯಲ್ಲಿ ಊರಲ್ಲಿ ಇಲ್ಲದವರ ಹೆಸರುಗಳನ್ನು ಕಾರ್ಡಿನಿಂದ ತೆಗೆದು ಹಾಕಿಲ್ಲ. ಈ ಕಾರಣಕ್ಕೆ ಅವರ ಹೆಸರಿನಲ್ಲಿ ಆಹಾರ ಸರಬರಾಜಾಗುತ್ತಿದ್ದು, ಸರಕಾರಕ್ಕೆ ಹೊರೆಯಾಗುತ್ತಿದೆ. ಹೀಗಾಗಿ ಕಾರ್ಡ್‌ನ ಪ್ರತಿ ಸದಸ್ಯರ ಬೆರಳಚ್ಚು (ಬಯೋಮೆಟ್ರಿಕ್‌)ಪಡೆಯಲಾಗುತ್ತಿದೆ. ಕಾರ್ಡ್‌ನಲ್ಲಿ ಹೆಸರಿರುವ ಎಷ್ಟು ಸದಸ್ಯರು ಬೆರಳಚ್ಚು ಕೊಡುತ್ತಾರೋ ಅವರಿಗೆ ಮಾತ್ರ ರೇಷನ್‌ ಕೊಡಲಾಗುತ್ತದೆ.

ಇ-ಕೆವೈಸಿ ಅಪ್‌ಡೇಟ್‌ ವ್ಯವಸ್ಥೆಯು ಒಂದು ಬಾರಿ ಮಾತ್ರ ನಡೆಯಲಿದ್ದು, ಎಲ್ಲ ಸದಸ್ಯರು ಬೆರಳಚ್ಚು ನೀಡಿದ ಬಳಿಕ ಎಂದಿನಂತೆ ಪ್ರತಿ ತಿಂಗಳು ಕುಟುಂಬದ ಯಾವುದೇ ಒಬ್ಬ ಸದಸ್ಯ ಬಂದು ಪಡಿತರ ಪಡೆಯಬಹುದಾಗಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago