ಬೆಂಗಳೂರು:ಜುಲೈ 31 ರೊಳಗೆ ರೇಷನ್ ಕಾರ್ಡ್ ಅನ್ನು ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ಪಡಿತರ ಸಿಗುವುದಿಲ್ಲ.
ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರು ಜುಲೈ 31 ರೊಳಗೆ ಆಧಾರ್ ದೃಡೀಕರಣ(ಇ-ಕೆವೈಸಿ) ಮಾಡಿಸಬೇಕಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸುತ್ತೋಲೆ ಹೊರಡಿಸಿದೆ.
ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ಇ-ಕೆವೈಸಿ ಮಾಡಿಸಬೇಕಿದೆ. ಇದು ಸಂಪೂರ್ಣ ಉಚಿತವಾಗಿದ್ದು, ಯಾರು ಹಣ ಪಾವತಿಸುವಂತಿಲ್ಲ. ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು. ತಾವು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ ದೃಢೀಕರಣದೊಂದಿಗೆ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.
ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ಬಯೊಮೆಟ್ರಿಕ್ ನೀಡುವುದು ಕಡ್ಡಾಯವಾಗಿದೆ. ಬಯೋಮೆಟ್ರಿಕ್ ನೀಡಿದವರಿಗೆ ಮಾತ್ರ ಪಡಿತರವನ್ನು ವಿತರಿಸಲಾಗುತ್ತದೆ ಎಂದು ಹೇಳಲಾಗಿದೆ.
ಜುಲೈ 31 ರೊಳಗೆ ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲರೂ ನ್ಯಾಯಬೆಲೆ ಅಂಗಡಿಗೆ ಹೋಗಿ ದೃಢೀಕರಣ ನೀಡಬೇಕಿದೆ. ಕೆವೈಸಿ ಪ್ರಕ್ರಿಯೆ ಮುಗಿದ ಬಳಿಕ ಪಡಿತರ ಚೀಟಿಯಿಂದ ತೆಗೆದುಹಾಕಲು ಉಳಿದವರಿಗೆ ಮಾತ್ರ ಪಡಿತರ ವಿತರಿಸಲಾಗುವುದು.
ಇ-ಕೆವೈಸಿ ಯಾಕೆ ಬೇಕು?
ಹಲವು ವರ್ಷಗಳ ಹಿಂದೆಯೇ ಪಡಿತರ ಸದಸ್ಯರ ಆಧಾರ್ ನಂಬರ್ ಲಿಂಕ್ ಮಾಡಲಾಗಿದೆ. ಇದರ ಆಧಾರದ ಮೇಲೆ ಆಹಾರ ಧಾನ್ಯ ಪೂರೈಕೆಯಾಗುತ್ತಿದೆ. ಆದರೆ, ಮೃತರ, ಪರಸ್ಥಳದಲ್ಲಿ ನೆಲೆಸಿದವರ, ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೀಗೆ ನಾನಾ ರೀತಿಯಲ್ಲಿ ಊರಲ್ಲಿ ಇಲ್ಲದವರ ಹೆಸರುಗಳನ್ನು ಕಾರ್ಡಿನಿಂದ ತೆಗೆದು ಹಾಕಿಲ್ಲ. ಈ ಕಾರಣಕ್ಕೆ ಅವರ ಹೆಸರಿನಲ್ಲಿ ಆಹಾರ ಸರಬರಾಜಾಗುತ್ತಿದ್ದು, ಸರಕಾರಕ್ಕೆ ಹೊರೆಯಾಗುತ್ತಿದೆ. ಹೀಗಾಗಿ ಕಾರ್ಡ್ನ ಪ್ರತಿ ಸದಸ್ಯರ ಬೆರಳಚ್ಚು (ಬಯೋಮೆಟ್ರಿಕ್)ಪಡೆಯಲಾಗುತ್ತಿದೆ. ಕಾರ್ಡ್ನಲ್ಲಿ ಹೆಸರಿರುವ ಎಷ್ಟು ಸದಸ್ಯರು ಬೆರಳಚ್ಚು ಕೊಡುತ್ತಾರೋ ಅವರಿಗೆ ಮಾತ್ರ ರೇಷನ್ ಕೊಡಲಾಗುತ್ತದೆ.
ಇ-ಕೆವೈಸಿ ಅಪ್ಡೇಟ್ ವ್ಯವಸ್ಥೆಯು ಒಂದು ಬಾರಿ ಮಾತ್ರ ನಡೆಯಲಿದ್ದು, ಎಲ್ಲ ಸದಸ್ಯರು ಬೆರಳಚ್ಚು ನೀಡಿದ ಬಳಿಕ ಎಂದಿನಂತೆ ಪ್ರತಿ ತಿಂಗಳು ಕುಟುಂಬದ ಯಾವುದೇ ಒಬ್ಬ ಸದಸ್ಯ ಬಂದು ಪಡಿತರ ಪಡೆಯಬಹುದಾಗಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…