ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ:ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ಸದಸ್ಯರ ಸಭೆಯ ನಂತರ ನಿರ್ಧಾರ: vishwanews24

ಜು.1ರಿಂದ ಶಾಲೆ ಆರಂಭಕ್ಕೆ ಸರ್ಕಾರ ಸಿದ್ಧತೆ: ಪೋಷಕರ ಜೊತೆಗಿನ ಸಭೆ ಬಳಿಕ ದಿನಾಂಕ ಪ್ರಕಟಕ್ಕೆ ಚಿಂತನೆ

ಬೆಂಗಳೂರು: ಕೊರೋನಾ ಕಾರಣ ಶಾಲೆಗಳನ್ನು ಆರಂಭಿಸಬಾಹದು ಎಂದು ರಾಷ್ಟ್ರೀಯ ಮಟ್ಟದಲ್ಲಿ ಪೋಷಕರು ಆಂದೋಲನೆ ನಡೆಸುತ್ತಿರುವ ನಡುವಲ್ಲೇ ಸರ್ಕಾರ ರಾಜ್ಯದಲ್ಲಿ ಶಾಲೆಗಳನ್ನು ಜುಲೈ 1ರಿಂದ ಆರಂಭಿಸಲು ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಇದಕ್ಕಾಗಿ ಪೂರ್ವ ಪ್ರಾಥಮಿಕ (ಪ್ರಿಕೆಜಿ, ಎಲ್’ಕೆಜಿ, ಯುಕೆಜಿ) ಹಂತವೂ ಸೇರಿದಂತೆ ಶಾಲೆಗಳ ಆರಂಭಕ್ಕೆ ಕರಡು ವೇಳಾಪಟ್ಟಿ ಕೂಡ ಪ್ರಕಟಿಸಿದ್ದು, ಈ ಪ್ರಕಾರ ಜುಲೈ.1ರಿಂದ ಜುಲೈ20ರವರೆಗೆ 3 ಹಂತಗಳಲ್ಲಿ ಮಕ್ಕಳಿಗೆ ಶಾಲೆ ಆರಂಭಿಸುವ ಚಿಂತನೆ ನಡೆಸಿದೆ. ಜುಲೈ.1ರಿಂದ 4-7 ತರಗತಿ, 1-3 ಜುಲೈ 15 ಮತ್ತು 8-10 ತರಗತಿ ಜುಲೈ 15ರಿಂದ, ಪೂರ್ವ ಪ್ರಾಥಮಿಕ ಶಾಲೆಯನ್ನು ಜುಲೈ 20ರಿಂದ ಆರಂಭಿಸಲು ನಿರ್ಧರಿಸಿದೆ.

ನೂತನ ಶೈಕ್ಷಣಿಕ ವರ್ಷದಲ್ಲಿ ತರಗತಿಯ ಒಟ್ಟಾರೆ ಸಂಖ್ಯಾಬಲವನ್ನು ಎರಡು ಭಾಗವಾಗಿ ವಿಭಾಗಿಸಿ ಎರಡು ಬ್ಯಾಚ್ ಗಳಂತೆ ತರಗತಿ ನಡೆಸಬೇಕಾಗಿದ್ದು, ಬೆಳಿಗ್ಗೆ 8-12 ಮತ್ತು ಮಧ್ಯಾಹ್ನ 1-5 ಗಂಟೆಗಳ ಕಾಲ ಶಾಲೆಗಳನ್ನು ನಡೆಸಬೇಕಿದೆ.

ಇದಕ್ಕಾಗಿ ಅಭಿಪ್ರಾಯ ಆಹ್ವಾನಿಸಲಾಗಿದೆ ಜೊತೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಜೂ.5ರಿಂದ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗ ಕರ್ತವ್ಯಕ್ಕೆ ಹಾಜರಾಗಿ ಆಡಳಿತಾತ್ಮಕ ಪ್ರಕ್ರಿಯೆ ಆರಂಭಿಸಬೇಕು ಹಾಗೂ ಜೂನ್.8 ರಿಂದ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಅವಕಾಶ ನೀಡಿದೆ.

ಇದೇ ವೇಳೆ ಶಾಲೆ ಆರಂಭಿಸುವ ಬಗ್ಗೆ ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿ ಸದಸ್ಯರ ಸಭೆಯನ್ನು ಶಾಲೆಗಳು ಜೂ.10ರಿಂದ 12ರವರೆಗೆ ನಡೆಸಬೇಕು. ಈ ಸಮಾಲೋಚನಾ ಸಭೆ ನಡೆಸಿ, ವ್ಯಕ್ತವಾಗುವ ಅಭಿಪ್ರಾಯಗಳ ಆಧಾರದ ಮೇಲೆ ಆರಂಭದ ದಿನಾಂಕ ನಿರ್ಧರಿಸಲು ತೀರ್ಮಾನಿಸಿದೆ.

ಸಮಾಲೋಚನಾ ಪ್ರಕ್ರಿಯೆ 2 ಹಂತದಲ್ಲಿ ನಡೆಯಲಿದೆ. ಹಂತ 1 ರಲ್ಲಿ ಶಿಕ್ಷಮ ಸಚಿವರು ಪೋಷಕರು, ಸರ್ಕಾರ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸದಸ್ಯರು, ಶಿಕ್ಷಣ ತಜ್ಞರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸುವರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago