ಬೆಂಗಳೂರು : ಲಾಕ್ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜು.12ರಿಂದ ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಸಾರಿಗೆಗಳ ಕಾರ್ಯಾಚರಣೆ ಪುನರಾರಂಭಿಸಲಾಗುತ್ತಿದೆ.
ಕರ್ನಾಟಕ ಸರ್ಕಾರದ ಮಾರ್ಗಸೂಚಿಗಳಂತೆ ನಿಗಮದ ಬಸ್ಸುಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿರತಕ್ಕದ್ದು. ವಿದ್ಯಾರ್ಥಿಗಳು, ಶಿಕ್ಷಣ, ವ್ಯವಹಾರ ಮತ್ತು ಇತರೆ ಕಾರಣಗಳಿಗಾಗಿ ಕರ್ನಾಟಕಕ್ಕೆ ದಿನನಿತ್ಯ ಪ್ರಯಾಣಿಸುವ ಸಾರ್ವಜನಿಕರು 15 ದಿನಗಳಿಗೊಮ್ಮೆ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪರೀಕ್ಷಾ ವರದಿ ಹೊಂದಿರತಕ್ಕದ್ದು.
ಪ್ರಯಾಣಿಕರು ಕಡ್ಡಾಯವಾಗಿ ಮುಖ ಗವಸು ಧರಿಸುವುದು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವಾಗ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಲು ಕೋರಲಾಗಿದೆ.
ಮುಂಗಡ ಆಸನಗಳನ್ನು ksrtc.karnataka.gov.in/www.ksrtc.in ವೆಬ್ ಸೈಟ್ ಮತ್ತು ನಿಗಮದ/ಫ್ರಾಂಚೈಸಿ ಕೌಂಟರ್ಗಳ ಮುಖಾಂತರ ಕಾಯ್ದಿರಿಸಿಕೊಳ್ಳಬಹುದಾಗಿದೆ. ಪ್ರಯಾಣಿಕರು ಸದರಿ ಸೌಲಭ್ಯದ ಸದುಪಯೋಗ ಪಡೆಯಲು ಕೋರಲಾಗಿದೆ. ಹೆಚ್ಚುವರಿ ಮಾಹಿತಿಗಾಗಿ ಕರಾರಸಾ ನಿಗಮದ ಕಾಲ್ಸೆಂಟರ್ ದೂರವಾಣಿ ಸಂಖ್ಯೆ 080-26252625 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…