Featured

ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಕರಾವಳಿಗೆ ಮತ್ತೊಂದು ವಿಶೇಷ ರೈಲು – vishwanews24

ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಕರಾವಳಿಗೆ ಮತ್ತೊಂದು ವಿಶೇಷ ರೈಲು

ಕುಂದಾಪುರ: ಭಾರೀ ಮಳೆಯಾಗುತ್ತಿರುವುದರಿಂದ ಬೆಂಗಳೂರನ್ನು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕು ಆಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯವು ಮತ್ತೊಂದು ವಿಶೇಷ ರೈಲು ಸಂಚಾರಕ್ಕೆ ಮುಂದಾಗಿದೆ. ಈ ರೈಲು ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಪಡೀಲು ಬೈಪಾಸ್‌ ಮಾರ್ಗವಾಗಿ ಕುಂದಾಪುರ, ಕಾರವಾರದವರೆಗೆ ಸಂಚರಿಸಲಿದೆ. ಬಳಿಕ ಬೆಂಗಳೂರಿಗೆ ಮರಳಲಿದೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ವಾರಾಂತ್ಯದ ವಿಶೇಷ ರೈಲಿಗಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಸಚಿವರು ತುರ್ತು ಸ್ಪಂದಿಸಿ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಿದ್ದಾರೆ. ಇಂಥದ್ದೊಂದು ರೈಲಿನ ಅಗತ್ಯದ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಸಂಸದರಿಗೆ ಮನವಿ ಸಲ್ಲಿಸಿತ್ತು.

ಈ ರೈಲು ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಜು.26ರ ಮಧ್ಯರಾತ್ರಿ 12.30ಕ್ಕೆ ಹೊರಟು ಜು.27ರ ಬೆಳಗ್ಗೆ 11.30ಕ್ಕೆ ಉಡುಪಿ, 12.15ಕ್ಕೆ ಕುಂದಾಪುರ ಹಾಗೂ ಸಂಜೆ 4ಕ್ಕೆ ಕಾರವಾರ ತಲುಪಲಿದೆ. ಜು. 27ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಕುಂದಾಪುರ, ಉಡುಪಿ ಮಾರ್ಗವಾಗಿ ಪಡೀಲ್‌ ಬೈಪಾಸ್‌ ಮೂಲಕ ಜು.28ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸರ್‌.ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ.
ಜು.28ರ ಮಧ್ಯರಾತ್ರಿ 2.30ಕ್ಕೆ ಮತ್ತೆ ಬೆಂಗಳೂರಿನಿಂದ ಕಾರವಾರಕ್ಕೆ ಹೊರಡಲಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

7 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

7 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

7 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

7 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

7 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

8 hours ago