Featured

ಜು.31ರವರೆಗೆ ‘ಒಂದು ದೇಶ, ಒಂದು ಪಡಿತರ’ ಯೋಜನೆ ಮುಂದುವರಿಸಲು ಸುಪ್ರೀಂ ಆದೇಶ -Vishwanews24

ಜು.31ರವರೆಗೆ ‘ಒಂದು ದೇಶ, ಒಂದು ಪಡಿತರ’ ಯೋಜನೆ ಮುಂದುವರಿಸಲು ಸುಪ್ರೀಂ ಆದೇಶ -Vishwanews24

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ದೇಶದ ಎಲ್ಲ ಬಡವರ್ಗದವರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ‘ ಯೋಜನೆಯನ್ನು ದೇಶದಾದ್ಯಂತ ಜುಲೈ 31ರವರೆಗೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಕೊರೊನಾದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕರ್ಫ್ಯೂ ಮತ್ತು ಲಾಕ್‌ಡೌನ್‌ನಿಂದಾಗಿ ವಲಸೆ ಕಾರ್ಮಿಕರಿಗೆ ಆಹಾರ ಭದ್ರತೆ, ಮತ್ತಿತರ ಸೌಲಭ್ಯಗಳನ್ನು ನೀಡಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ಮೂವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ, ಈ ನಿರ್ದೇಶನಗಳನ್ನು ನೀಡಿದೆ ಎಂದು ವರದಿಯಾಗಿದೆ.

ಇನ್ನು ಜುಲೈ 31ರ ಗಡುವಿನೊಳಗೆ ಈ ಯೋಜನೆಗಳ ಪ್ರಯೋಜನ ಪಡೆಯುವ ದೃಷ್ಟಿಯಿಂದ ಅಸಂಘಟಿತ ಕಾರ್ಮಿಕರ ವಲಯದವರ ನೋಂದಣಿ ಮಾಡಿಸಿಕೊಳ್ಳುವುದಕ್ಕಾಗಿ ರಾಷ್ಟ್ರೀಯ ಮಾಹಿತಿ ಕೇಂದ್ರದ ನೆರವಿನೊಂದಿಗೆ ಒಂದು ಜಾಲತಾಣ ಅಭಿವೃದ್ಧಿಪಡಿಸುವಂತೆಯೂ ನ್ಯಾಯಪೀಠ ಕೇಂದ್ರಕ್ಕೆ ನಿರ್ದೇಶನ ನೀಡಿತು.

“ಒಂದು ದೇಶ, ಒಂದು ಪಡಿತರ ಚೀಟಿ” ಯೋಜನೆಯಡಿ, ವಲಸೆ ಕಾರ್ಮಿಕರು ಕೆಲಸಕ್ಕಾಗಿ ಹೊರ ರಾಜ್ಯಗಳಿಗೆ ಹೋಗಿರುವ ಸಂದರ್ಭದಲ್ಲಿ ಕೆಲಸ ಮಾಡುವ ಸ್ಥಳದಲ್ಲೇ ಉಚಿತ ಪಡಿತರ ಪಡೆಯಬಹುದು. ಇಲ್ಲಿ ಪಡಿತರ ಚೀಟಿ ನೋಂದಣಿ ಮಾಡಿಸದಿದ್ದರೂ ಕಾರ್ಮಿಕರಿಗೆ ಈ ಸೌಲಭ್ಯ ದೊರೆಯಲಿದೆ ಎಂದು ನ್ಯಾಯಪೀಠ ತಿಳಿಸಿದೆ.

Vishwa News 24

Recent Posts

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ -vishwanews24

ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್‌ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…

13 seconds ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…

6 minutes ago

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ – vishwanews24

ಹಿಜಾಬ್‌ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ  ಉಗ್ರ ಪ್ರತಿಭಟನೆ ಎಚ್ಚರಿಕೆ…

13 minutes ago

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago