ಬೆಂಗಳೂರು : ಈಗಾಗಲೇ ಮೈತ್ರಿ ಸರ್ಕಾರ ಪತನವಾಗಿದ್ದು, ರಾಜ್ಯದಲ್ಲಿ ಯಾವುದೇ ಸರ್ಕಾರ ಅಸ್ತಿತ್ವದಲ್ಲಿಲ್ಲ, ಬಜೆಟ್ ಕೂಡ ಇನ್ನೂ ಪಾಸ್ ಆಗಿಲ್ಲ, ಹೀಗಾಗಿ ಆಗಸ್ಟ್ 1 ರಿಂದ ರಾಜ್ಯದ ಸರ್ಕಾರಿ ನೌಕರರ ಸಂಬಳ ಬಿಡುಗಡೆಯಾಗಲ್ಲ.
ಹೌದು, ಆ. 1 ರೊಳಗೆ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗದಿದ್ದರೆ, ವಿಧವಾ ವೇತನ, ವೃಧ್ಯಾಪ್ಯ ವೇತನ, ಮಾಸಿಕ ಪೆನ್ಷನ್ ಸೇರಿದಂತೆ ಸರ್ಕಾರಿ ನೌಕರರ ಸಂಬಳ ಕೂಡ ಬಿಡುಗಡೆಯಾಗಲ್ಲ.
ಸರ್ಕಾರದಲ್ಲಿ ಆ. 1 ರಿಂದ ಯಾವುದೇ ಪರಿಹಾರ ಬಿಡುಗಡೆಯಾಗುವುದಿಲ್ಲ. ಒಂದು ವೇಳೆ 6 ದಿನಗಳ ಒಳಗೆ ಹೊಸ ಸರ್ಕಾರ ರಚನೆಯಾಗಿ ಬಜೆಟ್ ಅಂಗೀಕಾರವಾಗಿ,ಆರ್ಥಿಕ ಮಸೂದೆ ಪಾಸ್ ಆಗಬೇಕು, ಇಲ್ಲದಿದ್ದರೆ ಸರ್ಕಾರದ ಖಜಾನೆಯಿಂದ ಬಿಡಿಗಾಸು ಕೂಡ ಬಿಡುಗಡೆಯಾಗಲ್ಲ ಎಂದು ಹೇಳಲಾಗುತ್ತಿದೆ.
ಆಗಸ್ಟ್ 1 ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ವಿತ್ತಿಯ ಕಲಾಪ ನಡೆಸಿ, ಆರ್ಥಿಕ ಮಸೂದೆ ಪಾಸ್ ಮಾಡಬೇಕಾಗುತ್ತದೆ. ಅಲ್ಲಿಂದ ಅಂಗೀಕಾರ ಪಡೆದು ರಾಜ್ಯಪಾಲರಿಗೆ ಕಳುಹಿಸಬೇಕು. ಇದು ಮಾಡದಿದ್ದರೆ ರಾಜ್ಯದ ಜನತೆ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ.
ಮೈತ್ರಿ ಸರ್ಕಾರ ಪತನಗೊಳ್ಳುತ್ತಿದ್ದಂತೆಯೇ ಹೊಸ ಸರ್ಕಾರ ರಚನೆಗೆ ತರಾತುರಿಯಲ್ಲಿದ್ದ ಬಿಜೆಪಿ ನಾಯಕರು, ಪಕ್ಷದ ಕೇಂದ್ರ ನಾಯಕರಿಂದ ಯಾವುದೇ ಸೂಚನೆ ಬಾರದ ಕಾರಣ ಸುಮ್ಮನಾಗಿದ್ದಾರೆ. ಈ ಮಧ್ಯೆ ಜುಲೈ 31 ರೊಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಾರದಿದ್ದರೆ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಹೊಸ ಬಿಕ್ಕಟ್ಟೊಂದು ಎದುರಾಗಲಿದೆ ಎಂದು ಹೇಳಲಾಗಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…