ಬೆಂಗಳೂರು : ಈಗಾಗಲೇ ಮೈತ್ರಿ ಸರ್ಕಾರ ಪತನವಾಗಿದ್ದು, ರಾಜ್ಯದಲ್ಲಿ ಯಾವುದೇ ಸರ್ಕಾರ ಅಸ್ತಿತ್ವದಲ್ಲಿಲ್ಲ, ಬಜೆಟ್ ಕೂಡ ಇನ್ನೂ ಪಾಸ್ ಆಗಿಲ್ಲ, ಹೀಗಾಗಿ ಆಗಸ್ಟ್ 1 ರಿಂದ ರಾಜ್ಯದ ಸರ್ಕಾರಿ ನೌಕರರ ಸಂಬಳ ಬಿಡುಗಡೆಯಾಗಲ್ಲ.
ಹೌದು, ಆ. 1 ರೊಳಗೆ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗದಿದ್ದರೆ, ವಿಧವಾ ವೇತನ, ವೃಧ್ಯಾಪ್ಯ ವೇತನ, ಮಾಸಿಕ ಪೆನ್ಷನ್ ಸೇರಿದಂತೆ ಸರ್ಕಾರಿ ನೌಕರರ ಸಂಬಳ ಕೂಡ ಬಿಡುಗಡೆಯಾಗಲ್ಲ.
ಸರ್ಕಾರದಲ್ಲಿ ಆ. 1 ರಿಂದ ಯಾವುದೇ ಪರಿಹಾರ ಬಿಡುಗಡೆಯಾಗುವುದಿಲ್ಲ. ಒಂದು ವೇಳೆ 6 ದಿನಗಳ ಒಳಗೆ ಹೊಸ ಸರ್ಕಾರ ರಚನೆಯಾಗಿ ಬಜೆಟ್ ಅಂಗೀಕಾರವಾಗಿ,ಆರ್ಥಿಕ ಮಸೂದೆ ಪಾಸ್ ಆಗಬೇಕು, ಇಲ್ಲದಿದ್ದರೆ ಸರ್ಕಾರದ ಖಜಾನೆಯಿಂದ ಬಿಡಿಗಾಸು ಕೂಡ ಬಿಡುಗಡೆಯಾಗಲ್ಲ ಎಂದು ಹೇಳಲಾಗುತ್ತಿದೆ.
ಆಗಸ್ಟ್ 1 ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ವಿತ್ತಿಯ ಕಲಾಪ ನಡೆಸಿ, ಆರ್ಥಿಕ ಮಸೂದೆ ಪಾಸ್ ಮಾಡಬೇಕಾಗುತ್ತದೆ. ಅಲ್ಲಿಂದ ಅಂಗೀಕಾರ ಪಡೆದು ರಾಜ್ಯಪಾಲರಿಗೆ ಕಳುಹಿಸಬೇಕು. ಇದು ಮಾಡದಿದ್ದರೆ ರಾಜ್ಯದ ಜನತೆ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ.
ಮೈತ್ರಿ ಸರ್ಕಾರ ಪತನಗೊಳ್ಳುತ್ತಿದ್ದಂತೆಯೇ ಹೊಸ ಸರ್ಕಾರ ರಚನೆಗೆ ತರಾತುರಿಯಲ್ಲಿದ್ದ ಬಿಜೆಪಿ ನಾಯಕರು, ಪಕ್ಷದ ಕೇಂದ್ರ ನಾಯಕರಿಂದ ಯಾವುದೇ ಸೂಚನೆ ಬಾರದ ಕಾರಣ ಸುಮ್ಮನಾಗಿದ್ದಾರೆ. ಈ ಮಧ್ಯೆ ಜುಲೈ 31 ರೊಳಗೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಾರದಿದ್ದರೆ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಹೊಸ ಬಿಕ್ಕಟ್ಟೊಂದು ಎದುರಾಗಲಿದೆ ಎಂದು ಹೇಳಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…