Featured

ಜೂನ್ 14ರ ಬಳಿಕ ‘ರಾಜ್ಯದಲ್ಲಿ ಹಂತ ಹಂತಗಳಲ್ಲಿ ಲಾಕ್ ಡೌನ್ ಸಡಿಲಿಕೆ ‘ – ಸಚಿವ ಆರ್.ಆಶೋಕ್ – Vishwanews24

ಜೂನ್ 14ರ ಬಳಿಕ ‘ರಾಜ್ಯದಲ್ಲಿ ಹಂತ ಹಂತಗಳಲ್ಲಿ ಲಾಕ್ ಡೌನ್ ಸಡಿಲಿಕೆ ‘ – ಸಚಿವ ಆರ್.ಆಶೋಕ್ – Vishwanews24

ಬೆಂಗಳೂರು,: ಕೊರೊನಾ ಸೋಂಕು ಕೊಂಚ ನಿಯಂತ್ರಣಕ್ಕೆ ಬಂದಿರುವ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಲು ಸರ್ಕಾರ ಮುಂದಾಗಿದೆ. ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಪ್ರಸ್ತುತ ರಾಜ್ಯ ಸರ್ಕಾರ ಜಾರಿ ಮಾಡಿರುವ ಲಾಕ್ ಡೌನ್ ಜೂನ್ 14ಕ್ಕೆ ಮುಗಿಯಲಿದ್ದು, ಜೂನ್ 14ರ ಬಳಿಕ ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗಲಿರುವ ಸಾಧ್ಯತೆ ಇದೆ. ಇದಕ್ಕೆ ಕಂದಾಯ ಸಚಿವ ಆರ್ ಅಶೋಕ್ ಅವರ ಹೇಳಿಕೆಯೂ ಪುಷ್ಟಿ ನೀಡಿದೆ.

” ರಾಜ್ಯದಲ್ಲಿ ಜೂನ್ 14ರ ಬಳಿಕ ತಕ್ಷಣ ಅನ್ ಲಾಕ್ ಮಾಡುವುದರ ಬದಲಾಗಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಸರ್ಕಾರವೂ ಸುಮಾರು ಐದು ಹಂತಗಳಲ್ಲಿ ಅನ್ ಲಾಕ್ ಮಾಡುವ ಚಿಂತನೆ ಮಾಡಲಾಗಿದೆ. ಮೊದಲ ಹಂತದಲ್ಲಿ ಖರೀದಿಯ ಅವಧಿಯನ್ನು ವಿಸ್ತರಣೆ ಮಾಡುವ ಚಿಂತನೆ ಇದೆ. ಬೆಳಿಗ್ಗೆ 6 ರಿಂದ 10ರವರೆಗೆ ನೀಡಲಾಗಿರುವ ಅವಕಾಶವನ್ನು 12 ಗಂಟೆಯವರೆಗೆ ವಿಸ್ತರಿಸುವ ಚಿಂತನೆ ಇದೆ” ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ

ಇನ್ನೂ ಪಾರ್ಕ್ ಗಳಲ್ಲಿ ವಾಕಿಂಗ್ ಮಾಡೋದಕ್ಕೆ ಅವಕಾಶ ನೀಡಬಹುದು ಎಂಬುದಾಗಿ ತಜ್ಞರು ಸೂಚಿಸಿದ್ದಾರೆ. ಹೀಗಾಗಿ ಅನ್ ಲಾಕ್ ಮೊದಲ ಹಂತದಲ್ಲಿಯೇ ಪಾರ್ಕ್ ನಲ್ಲಿ ವಾಕಿಂಗ್ ಮಾಡೋದಕ್ಕೂ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜೂನ್.14ರ ನಂತ್ರ ಹಂತ ಹಂತವಾಗಿ ಅನ್ ಲಾಕ್ ಜಾರಿಗೊಳಿಸೋ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

3 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

4 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

4 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

7 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

7 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

8 hours ago