2022ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಮೇ 19ರಂದು ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮುಕ್ತಾವಗಿದ್ದು, ಈಗ ಕರ್ನಾಟಕ ಶಿಕ್ಷಣ ಇಲಾಖೆ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2021-22ನೇ ಸಾಲಿನ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 27 ರಿಂದ ಜುಲೈ 4ರ ವರಗೆ ಪೂರಕ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಮಂಡಳಿ ನಿರ್ಧರಿಸಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ.
ಪೂರಕ ಪರೀಕ್ಷೆಯ ವೇಳಾ ಪಟ್ಟಿ
ಜೂನ್ 27 ಸೋಮವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರವರೆಗೆ-ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ 1.45 ರಿಂದ 5.15 ರವರೆಗೆ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಜೂನ್ 28 ಮಂಗಳವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್ಸಿಆರ್ಟಿ), ಸಂಕ್ಕೃತ.
ಜೂನ್ 29 ಬುಧವಾರ -ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ದ್ವಿತೀಯ ಭಾಷೆ- ಕನ್ನಡ, ಇಂಗ್ಲಿಷ್.
ಜೂನ್ 30 ಗುರುವಾರ -ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಸಮಾಜ ವಿಜ್ಞಾನ.
ಜುಲೈ 01 ಶುಕ್ರವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ತೃತೀಯ ಭಾಷೆ- ಹಿಂದಿ(ಎನ್ಸಿಆರ್ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ಎಸ್ಕ್ಯೂಎಫ್ ಪರೀಕ್ಷಾ ವಿಷಯಗಳು: ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.45 ರವರೆಗೆ -ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ನೆಸ್.
ಜುಲೈ 02 ಶನಿವಾರ – ಬೆಳಗ್ಗೆ9.30 ರಿಂದ ಮಧ್ಯಾಹ್ನ 12.45 ವರೆಗೆ-ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ, ಮಧ್ಯಾಹ್ನ 2 ರಿಂದ ಸಂಜೆ 5.15ವರೆಗೆ- ಇಂಜಿನಿಯರಿಂಗ್ ಗ್ರಾಫಿಕ್ಸ್-2
ಜುಲೈ 04 ಸೋಮವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 12 .45 ರವರೆಗೆ – ಗಣಿತ, ಸಮಾಜ ಶಾಸ್ತ್ರ.
2022ನೇ ಸಾಲಿನಲ್ಲಿ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆಗೆ ಒಟ್ಟು 8,73,859 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರ ಪೈಕಿ 8,53,436 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇನ್ನು 20,423 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಈ ಬಾರಿ ಪರೀಕ್ಷೆ ಬರೆದವರ ಪೈಕಿ 1,22,555 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಈಗ ಜೂನ್ 27 ರಿಂದ ಜುಲೈ 4ರ ವರಗೆ ಪರೀಕ್ಷೆ ನಡೆಸಲಾಗುತ್ತದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…