Featured

ಜೂನ್ 29 ರಂದು ಕೊರೋನ ಲಸಿಕಾ ಲಭ್ಯತೆ ವಿವರ -Vishwanews24

ಜೂನ್ 29 ರಂದು ಕೊರೋನ ಲಸಿಕಾ ಲಭ್ಯತೆ ವಿವರ -Vishwanews24

ಉಡುಪಿ : ಜಿಲ್ಲೆಯಲ್ಲಿ ಜೂನ್ 29 ರಂದು ಉಡುಪಿ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯ ಇರುವುದಿಲ್ಲ.

ನಗರ ಪ್ರದೇಶದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಜುಲೈ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ – 40 ಡೋಸ್ ಲಸಿಕೆ ಲಭ್ಯವಿರುತ್ತದೆ.

ಜಿಲ್ಲೆಯಲ್ಲಿರುವ ಪದವಿ, ಡಿಪ್ಲೋಮ ಹಾಗೂ ಐ.ಟಿ ಕಾಲೇಜುಗಳ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ಬೋಧಕ ಸಿಬ್ಬಂದಿಗಳಿಗೆ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್-19 ಲಸಿಕಾ ಶಿಬಿರವನ್ನು ಕಾಲೇಜುಗಳಲ್ಲಿ ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳು ಹಾಗೂ ಬೆಂಬಲ ಸಿಬ್ಬಂದಿಗಳು ತಾವು ಕಲಿಯುತ್ತಿರುವ / ಕರ್ತವ್ಯ ನಿರ್ವಹಿಸುತ್ತಿರುವ ಕಾಲೇಜನ್ನು ಅಥವಾ ಕಾಲೇಜಿನ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಿ ಲಭ್ಯವಿರುವ ಲಸಿಕಾ ಪ್ರಮಾಣವನ್ನು ಆಧರಿಸಿ ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿರುವ ಪದವಿ, ಡಿಪ್ಲೋಮ ಹಾಗೂ ಐ.ಟಿ ಕಾಲೇಜುಗಳ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳು ಹಾಗೂ ಬೆಂಬಲ ಸಿಬ್ಬಂದಿಗಳು ತಾವು ಕಲಿಯುತ್ತಿರುವ / ಕರ್ತವ್ಯ ನಿರ್ವಹಿಸುತ್ತಿರುವ ಕಾಲೇಜನ್ನು ಹೊರತುಪಡಿಸಿ ಬೇರೆ ಕಾಲೇಜುಗಳಲ್ಲಿ ಲಸಿಕೆಯನ್ನು ಪಡೆಯುವಂತಿಲ್ಲ. ಬೇರೆ ಜಿಲ್ಲೆಯ ಕಾಲೇಜುಗಳಲ್ಲಿ ಕಲಿಯುತ್ತಿರುವ ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಬಗ್ಗೆ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಣೆಯ ಮೂಲಕ ತಿಳಿಸಲಾಗುವುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

20 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

20 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

20 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago