Featured

ಜೂನ್ 29 ರಂದು ಕೊರೋನ ಲಸಿಕಾ ಲಭ್ಯತೆ ವಿವರ -Vishwanews24

ಜೂನ್ 29 ರಂದು ಕೊರೋನ ಲಸಿಕಾ ಲಭ್ಯತೆ ವಿವರ -Vishwanews24

ಉಡುಪಿ : ಜಿಲ್ಲೆಯಲ್ಲಿ ಜೂನ್ 29 ರಂದು ಉಡುಪಿ ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯ ಇರುವುದಿಲ್ಲ.

ನಗರ ಪ್ರದೇಶದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ಜುಲೈ 5 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿಶೀಲ್ಡ್ – 40 ಡೋಸ್ ಲಸಿಕೆ ಲಭ್ಯವಿರುತ್ತದೆ.

ಜಿಲ್ಲೆಯಲ್ಲಿರುವ ಪದವಿ, ಡಿಪ್ಲೋಮ ಹಾಗೂ ಐ.ಟಿ ಕಾಲೇಜುಗಳ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ಬೋಧಕ ಸಿಬ್ಬಂದಿಗಳಿಗೆ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್-19 ಲಸಿಕಾ ಶಿಬಿರವನ್ನು ಕಾಲೇಜುಗಳಲ್ಲಿ ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳು ಹಾಗೂ ಬೆಂಬಲ ಸಿಬ್ಬಂದಿಗಳು ತಾವು ಕಲಿಯುತ್ತಿರುವ / ಕರ್ತವ್ಯ ನಿರ್ವಹಿಸುತ್ತಿರುವ ಕಾಲೇಜನ್ನು ಅಥವಾ ಕಾಲೇಜಿನ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಿ ಲಭ್ಯವಿರುವ ಲಸಿಕಾ ಪ್ರಮಾಣವನ್ನು ಆಧರಿಸಿ ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯಬಹುದು.

ಜಿಲ್ಲೆಯಲ್ಲಿರುವ ಪದವಿ, ಡಿಪ್ಲೋಮ ಹಾಗೂ ಐ.ಟಿ ಕಾಲೇಜುಗಳ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳು ಹಾಗೂ ಬೆಂಬಲ ಸಿಬ್ಬಂದಿಗಳು ತಾವು ಕಲಿಯುತ್ತಿರುವ / ಕರ್ತವ್ಯ ನಿರ್ವಹಿಸುತ್ತಿರುವ ಕಾಲೇಜನ್ನು ಹೊರತುಪಡಿಸಿ ಬೇರೆ ಕಾಲೇಜುಗಳಲ್ಲಿ ಲಸಿಕೆಯನ್ನು ಪಡೆಯುವಂತಿಲ್ಲ. ಬೇರೆ ಜಿಲ್ಲೆಯ ಕಾಲೇಜುಗಳಲ್ಲಿ ಕಲಿಯುತ್ತಿರುವ ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಬಗ್ಗೆ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಣೆಯ ಮೂಲಕ ತಿಳಿಸಲಾಗುವುದು.

ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago