ಮಂಗಳೂರು: ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡದಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಸಾದ್ಯತೆ ಇದೆ.ಜೂನ್ 14ರವರೆಗೆ ಮಳೆ ಅಲರ್ಟ್ ನೀಡಲಾಗಿದೆ.
ಗುರುವಾರ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…