ಉಡುಪಿ

ಜೂ 13ಕ್ಕೆ ಗೋವಿಂದ ಕಲ್ಯಾಣ ಮಂಟಪದಲ್ಲಿ ಪೇಜಾವರ ಶ್ರೀಗಳ ಇಫ್ತಾರ್ ಕೂಟ

ಉಡುಪಿ, : ಈಗ ಮತ್ತೆ ಇಫ್ತಾರ್ ಸದ್ದು ಮಾಡುತ್ತಿದೆ. ಈ ಬಾರಿಯೂ ಮುಸಲ್ಮಾನರಿಗೆ ಇಫ್ತಾರ್ ಏರ್ಪಡಿಸುವ ಯೋಚನೆ ಪೇಜಾವರ ಶ್ರೀಗಳದ್ದು. ಈ ಸಂಬಂಧ ಅವರು ಮುಸ್ಲಿಂರ ಜೊತೆ ಚರ್ಚೆಯನ್ನೂ ಮಾಡಿದ್ದಾರೆ. ಈ ಬಾರಿ ಯಾವುದೇ ವಿವಾದ ಬೇಡ ಅಂತ ಕೃಷ್ಣಮಠದ ಬದಲು ಹೊರಗಡೆ ಗೋವಿಂದ ಕಲ್ಯಾಣ ಮಂಟಪದಲ್ಲಿ ಇಫ್ತಾರ್ ಏರ್ಪಡಿಸುವ ಕುರಿತು ಮಾತುಕತೆಗಳಾಗುತ್ತಿವೆ. ಜೂನ್ 13ನೇ ತಾರೀಕಿಗೆ ಮಾಡುವ ನಿರ್ಧಾರಕ್ಕೂ ಬರಲಾಗಿದೆ. ಖುದ್ದು ಪೇಜಾವರ ಶ್ರೀಗಳೂ ಇದರಲ್ಲಿ ಭಾಗವಹಿಸಲಿದ್ದಾರೆ. ಆದರೆ ಈ ಬಾರಿಯೂ ಕಳೆದ ಬಾರಿಯಂತೆ ವಿವಾದವಾಗುವ ಎಲ್ಲ ಸಾಧ್ಯತೆಗಳೂ ಕಂಡು ಬರುತ್ತಿವೆ.

ಕಳೆದ ವರ್ಷ ರಮ್ಝಾನ್ ತಿಂಗಳಲ್ಲಿ ಮುಸಲ್ಮಾನರಿಗೆ ಪೇಜಾವರ ಶ್ರೀಗಳು ಇಫ್ತಾರ್ ಕೂಟ ಏರ್ಪಡಿಸಿದ್ದು ಭಾರೀ ಪರ- ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ಸಲ ಮತ್ತೆ ರಮ್ಝಾನ್ ತಿಂಗಳು ಬಂದಿದೆ. ಈ ಬಾರಿಯೂ ಮುಸಲ್ಮಾನರಿಗೆ ಇಫ್ತಾರ್ ಕೂಟ ಏರ್ಪಡಿಸುವ ಇಚ್ಛೆ ಪೇಜಾವರ ಶ್ರೀಗಳದ್ದು.

ರಮ್ಜಾನ್ ತಿಂಗಳು ಬಂತೆಂದರೆ ಜಾತಿ- ಭೇದ ಮರೆತು ಸೌಹಾರ್ದ ಇಫ್ತಾರ್ ಕೂಟಗಳು ನಡೆಯುತ್ತವೆ. ಹಿಂದೂ, ಕ್ರಿಶ್ಚಿಯನ್ನರೂ ರಮ್ಝಾನ್ ತಿಂಗಳ ಇಫ್ತಾರ್ ಕೂಟಗಳನ್ನು ಏರ್ಪಡಿಸಿ ಸೌಹಾರ್ದತೆ ಮೆರೆಯುವುದು ನಡೆದುಕೊಂಡು ಬಂದಿದೆ. ಕಳೆದ ವರ್ಷ ಹಿರಿಯ ಯತಿ ಪೇಜಾವರ ಶ್ರೀಗಳು ಇಂತಹದ್ದೊಂದು ನಿರ್ಧಾರಕ್ಕೆ ಬಂದು, ಕ್ರಾಂತಿಯೊಂದಕ್ಕೆ ನಾಂದಿ ಹಾಡಿದರು. ಕೃಷ್ಣಮಠಕ್ಕೆ ಮುಸಲ್ಮಾನರನ್ನು ಆಹ್ವಾನಿಸಿ ಇಫ್ತಾರ್ ಕೊಡುವ ಮೂಲಕ ಸೌಹಾರ್ದದ ವಾತಾವರಣ ನಿರ್ಮಿಸುವುದು ಪೇಜಾವರ ಶ್ರೀಗಳ ಉದ್ದೇಶವಾಗಿತ್ತು. ಈ ಕ್ರಾಂತಿಕಾರಿ ಹೆಜ್ಜೆಗೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಯಿತು. ಆದರೆ ಅದರ ಜತೆಗೆ ವಿರೋಧವೂ ವ್ಯಕ್ತವಾಯಿತು. ಮುಖ್ಯವಾಗಿ ಶ್ರೀರಾಮ ಸೇನೆಯಂತಹ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ಮಾಡಿದವು. ಆದರೆ ಪೇಜಾವರ ಶ್ರೀಗಳು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು. ಕೃಷ್ಣಮಠಕ್ಕೆ ಜಾಗ ನೀಡಿದ್ದೇ ಮುಸಲ್ಮಾನರು. ಈ ಸೌಹಾರ್ದ ಪರಂಪರೆ ಇವತ್ತಿನದಲ್ಲ, ಹಿಂದಿನಿಂದಲೂ ಇದೆ ಅಂತ ಹೇಳಿ ವಿವಾದಕ್ಕೆ ತೆರೆ ಎಳೆದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago