Featured

ಜೂ.15ರಿಂದ ಮಂಗಳೂರು-ಮುಂಬೈ ದೈನಂದಿನ ರೈಲು ಸಂಚಾರ ಪುನರಾರಂಭ – Vishwanews24

ಜೂ.15ರಿಂದ ಮಂಗಳೂರು-ಮುಂಬೈ ದೈನಂದಿನ ರೈಲು ಸಂಚಾರ ಪುನರಾರಂಭ – Vishwanews24

ಉಡುಪಿ, : ರೈಲು ನಂ.02620/02619 ಮಂಗಳೂರು ಸೆಂಟ್ರಲ್- ಲೋಕಮಾನ್ಯ ತಿಲಕ್ ಮುಂಬೈ- ಮಂಗಳೂರು ಸೆಂಟ್ರಲ್ ದೈನಂದಿನ ಹಬ್ಬದ ವಿಶೇಷ ರೈಲು ಸಂಚಾರವನ್ನು ದಕ್ಷಿಣ ರೈಲ್ವೆಯ ಸಹಯೋಗದೊಂದಿಗೆ ಜೂ.15ರಿಂದ ಪುನರಾರಂಭಿಸುವುದಾಗಿ ಕೊಂಕಣ ರೈಲ್ವೆ ಇಂದು ಪ್ರಕಟಿಸಿದೆ.

ಮಂಗಳೂರು ಸೆಂಟ್ರಲ್-ಮುಂಬಯಿ ದೈನಂದಿನ ಸೂಪರ್‌ಫಾಸ್ಟ್ ರೈಲು ಜೂ.15ರಿಂದ 30ರವರೆಗೆ ಪ್ರತಿದಿನ ಅಪರಾಹ್ನ 12:40ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಡಲಿದ್ದು, ಮರುದಿನ ಮುಂಜಾನೆ 6:35ಕ್ಕೆ ಮುಂಬೈ ಲೋಕಮಾನ್ಯ ತಿಲಕ್ ತಲುಪಲಿದೆ.

ಜೂ.16ರಿಂದ ಜುಲೈ1ರವರೆಗೆ ಪ್ರತಿದಿನ ಅಪರಾಹ್ನ 3:20ಕ್ಕೆ ಮುಂಬೈಯಿಂದ ಹೊರಡುವ ರೈಲು, ಮರುದಿನ ಬೆಳಗ್ಗೆ 10:10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ಈ ರೈಲಿಗೆ ಮಂಗಳೂರಿನಿಂದ ಹೋಗುವಾಗ ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್, ಅಂಕೋಲ, ಕಾರವಾರ, ಮಡಗಾಂವ್ ಜಂಕ್ಷನ್, ಕುಡಾಲ್, ರತ್ನಗಿರಿ, ಚಿಪ್ಳೂಣ್, ಪನ್ವೇಲ್ ಹಾಗೂ ಠಾಣೆ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. ಮುಂಬಯಿಯಿಂದ ಬರುವಾಗ ಇವುಗಳೊಂದಿಗೆ ಮಂಗೋನ್ ಹಾಗೂ ಖೇಡ್ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆ ಇರುತ್ತದೆ.

ಈ ರೈಲು ಒಟ್ಟು 22 ಎಲ್‌ಎಚ್‌ಬಿ ಕೋಚ್‌ಗಳನ್ನು ಒಳಗೊಂಡಿರುತ್ತದೆ. ಇವುಗಳಲ್ಲಿ ಎರಡು ಟೂ ಟಯರ್ ಎಸಿ, ಮೂರು ತ್ರಿಟಯರ್ ಎಸಿ, 10 ಸ್ಲೀಪರ್ ಕೋಚ್, ಐದು ಸೆಕೆಂಡ್ ಸೀಟಿಂಗ್ ಕೋಚ್, ಎರಡು ಎಸ್‌ಎಲ್‌ಆರ್ ಇರಲಿವೆ.

ಮೊದಲೇ ಶೀಟು ರಿಸರ್ವ್ ಮಾಡಿ ಈ ರೈಲಿನಲ್ಲಿ ಪ್ರಯಾಣಿಸಬೇಕಿದೆ. ಪ್ರಯಾಣಿಕರು ಕಡ್ಡಾಯ ಮಾಸ್ಕ್ ಧರಿಸಿ, ಸುರಕ್ಷತಾ ಅಂತರ ಕಾಪಾಡುವುದು ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ್ ಆರ್.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

55 minutes ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

1 hour ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

1 hour ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

4 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

5 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

5 hours ago