Featured

ಜೂ.16 ರಿಂದ ತಾಜ್ ಮಹಲ್ ಸಹಿತ ಇತರ ಸ್ಮಾರಕಗಳು ಪ್ರವಾಸಿಗರಿಗೆ ಮುಕ್ತ -Vishwanews24

ಜೂ.16 ರಿಂದ ತಾಜ್ ಮಹಲ್ ಸಹಿತ ಇತರ ಸ್ಮಾರಕಗಳು ಪ್ರವಾಸಿಗರಿಗೆ ಮುಕ್ತ -Vishwanews24

ಹೊಸದಿಲ್ಲಿ:ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆ ಮುಚ್ಚಿದ ತಾಜ್ ಮಹಲ್ ಇತರ ಕೇಂದ್ರ ಸರಕಾರದಿಂದ ಸಂರಕ್ಷಿಸಲ್ಪಡುತ್ತಿರುವ ಸ್ಮಾರಕಗಳು ಜೂನ್ 16 ರಂದು ಮತ್ತೆ ತೆರೆಯಲಿವೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ) ತಿಳಿಸಿದೆ.

ಸಂದರ್ಶಕರು ಆನ್‌ಲೈನ್‌ನಲ್ಲಿ ಪ್ರವೇಶ ಟಿಕೆಟ್‌ಗಳನ್ನು ಕಾಯ್ದಿರಿಸಲು ಸಾಧ್ಯವಾಗುತ್ತದೆ ಹಾಗೂ ಯಾವುದೇ ಆಫ್‌ಲೈನ್ ಬುಕ್ಕಿಂಗ್ ಸೌಲಭ್ಯ ಲಭ್ಯವಿರುವುದಿಲ್ಲ ಎಂದು ಎಎಸ್‌ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಈಗಿನ ಪರಿಸ್ಥಿತಿಯನ್ನು ಪರಿಗಣಿಸಿ, ಎಲ್ಲಾ ಕೇಂದ್ರೀಕೃತ ಸಂರಕ್ಷಿತ ಸ್ಮಾರಕಗಳು / ತಾಣಗಳು ಹಾಗೂ ವಸ್ತುಸಂಗ್ರಹಾಲಯಗಳನ್ನು (ಎಎಸ್ಐ ಅಡಿಯಲ್ಲಿ) 16.06.2021 ರಿಂದ ತೆರೆಯಬೇಕೆಂದು ನಿರ್ಧರಿಸಲಾಗಿದೆ” ಎಂದು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಆದೇಶದಲ್ಲಿ ತಿಳಿಸಿದ್ದಾರೆ.

ಕೋವಿಡ್ -19 ರ ಎರಡನೇ ಅಲೆ ಕಾಣಿಸಿಕೊಂಡ ತಕ್ಷಣ ತಾಜ್ ಮಹಲ್, ಕೆಂಪು ಕೋಟೆ ಹಾಗೂ ಅಜಂತ ಗುಹೆಗಳು ಸೇರಿದಂತೆ ಎಲ್ಲಾ ಕೇಂದ್ರೀಕೃತ ಸಂರಕ್ಷಿತ ಸ್ಮಾರಕಗಳು ಹಾಗೂ ವಸ್ತು ಸಂಗ್ರಹಾಲಯಗಳನ್ನು ಎಪ್ರಿಲ್ 15 ರಂದು ಮುಚ್ಚಲು ಸರಕಾರ ಆದೇಶಿಸಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago