Featured

ಜೂ.16, 17 ಮತ್ತು 18ರಂದು ಕೆ-ಸಿಇಟಿ ಪರೀಕ್ಷೆ  ; ವೇಳಾಪಟ್ಟಿ ಪ್ರಕಟ – Vishwanews24

ಜೂ.16, 17 ಮತ್ತು 18ರಂದು ಕೆ-ಸಿಇಟಿ ಪರೀಕ್ಷೆ  ; ವೇಳಾಪಟ್ಟಿ ಪ್ರಕಟ – Vishwanews24

ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ  ಹೇಳಿದ್ದಾರೆ.

ಈ ಬಗ್ಗೆ ಸೋಮವಾರ ಮಾತನಾಡಿದ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

CET2022 ಪ್ರಸ್ತಾವಿತ ವೇಳಾಪಟ್ಟಿ ಇಂತಿದೆ

16/06/2022 – ಜೀವಶಾಸ್ತ್ರ, ಗಣಿತ

17/06/2022 – ಭೌತಶಾಸ್ತ್ರ, ರಸಾಯನಶಾಸ್ತ್ರ

18/06/2022 – ಕನ್ನಡ (ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ)

ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದೆ.

ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲೇನಾದರೂ ಮಾಹಿತಿಯನ್ನು ಪರಿಷ್ಕರಿಸುವುದಿದ್ದರೆ ಅಂಥವರಿಗೇ ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಸಚಿವರು ವಿವರಿಸಿದ್ದಾರೆ.

Vishwa News 24

Recent Posts

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು -vishwanews24

ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…

4 minutes ago

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು -vishwanews24

ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…

11 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ -vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…

23 minutes ago

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು -vishwanews24

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…

1 hour ago

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು -vishwanews24

ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…

1 hour ago

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ -vishwanews24

ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ ಮಂಗಳೂರು : ಬಿಜೆಪಿ…

2 hours ago