Featured

ಜೂ. 25ಕ್ಕೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ – vishwanews24

ಜೂ. 25ಕ್ಕೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

ನವದೆಹಲಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ ‘ಆ್ಯಕ್ಸಿಯಂ-4’ ಮಿಷನ್ ಉಡಾವಣೆಗೆ ಜೂನ್ 25ರಂದು ದಿನಾಂಕ ನಿಗದಿಪಡಿಸಲಾಗಿದೆ ಎಂದು ನಾಸಾ ಮಂಗಳವಾರ ಪ್ರಕಟಿಸಿದೆ.

ಆ್ಯಕ್ಸಿಯಂ-4 ಮಿಷನ್ ಜೂನ್ 25 ರಂದು ಬೆಳಗಿನ ಜಾವ 2:31ಕ್ಕೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್ ನ ಫಾಲ್ಕನ್-9 ರಾಕೆಟ್ ಉಡಾವಣೆಗೊಳ್ಳಲಿದೆ ಎಂದು ಎಂದು ನಾಸಾ ತಿಳಿಸಿದೆ.

ಕಮಾಂಡರ್ ಪೆಗ್ಗಿ ವಿಟ್ಸನ್ ಅವರು, ಆ್ಯಕ್ಸಿಯಂ-4 ವಾಣಿಜ್ಯ ಕಾರ್ಯಾಚರಣೆಯ ನೇತೃತ್ವವಹಿಸಿದ್ದಾರೆ. ಶುಕ್ಲಾ ಮಿಷನ್ ಪೈಲಟ್ ಆಗಿ, ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸ್ಪೇಸ್‌ಎಕ್ಸ್ ನ ಫಾಲ್ಕನ್ 9 ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಾಹ್ಯಾಕಾಶ ಯಾನ ಮುಂದೂಡಿಕೆಯಾಗಿದೆ. ಕಳೆದ ವಾರ ಉಡಾವಣಾ ಪ್ಯಾಡ್‌ನಲ್ಲಿ ಏಳು ಸೆಕೆಂಡುಗಳ ಬಿಸಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯ ಸಮಯದಲ್ಲಿ ಪ್ರೊಪಲ್ಷನ್ ಬೇಯಲ್ಲಿ LOX ಸೋರಿಕೆಯಾಗಿತ್ತು. ಈ ಕುರಿತು ಇಸ್ರೋ ತಂಡ ‘ಆ್ಯಕ್ಸಿಯಂ-4’ ಮತ್ತು ಸ್ಪೇಸ್ ಎಕ್ಸ್ ನ ತಜ್ಞರೊಂದಿಗೆ ಚರ್ಚೆ ನಡೆಸಿ, ಸೋರಿಕೆ ಸರಿಪಡಿಸಲು ಮತ್ತು ಉಡಾವಣೆಗೆ ತೆರವುಗೊಳಿಸುವ ಮೊದಲು ಅಗತ್ಯ ಮೌಲ್ಯೀಕರಣ ಪರೀಕ್ಷೆ ನಡೆಸಲು ನಿರ್ಧರಿಸಿತ್ತು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago