ಮುಂಬೈ: ಜೆಟ್ ಏರ್ವೇಯ್ಸ್ ಸಿಬ್ಬಂದಿ ವಿಮಾನದೊಳಗಿನ ತಾಂತ್ರಿಕ ದೋಷದ ಕಾರಣ ಪ್ರಯಾಣಿಕರ ಮೂಗು, ಕಿವಿಯಲ್ಲಿ ರಕ್ತ ಸೋರಿಕೆಯಾಗಿದ್ದು, ಇನ್ನು ಕೆಲವರಿಗೆ ತಲೆನೋವು ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಮುಂಬೈಯಿಂದ ಜೈಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಮುಂಬೈ ವಿಮಾನ ನಿಲ್ದಾಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಹಾಜರಿದ್ದ ಸಿಬ್ಬಂದಿಯ ವಿರುದ್ಧ ವಿಮಾನ ಅಪಘಾತ ತನಿಖಾ ದಳ (ಎಎಐಬಿ) ತನಿಖೆ ಕೈಗೊಂಡಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಉಪನಿರ್ದೇಶಕ ಜನರಲ್ ಲಲಿತ್ ಗುಪ್ತಾ ತಿಳಿಸಿದ್ದಾರೆ.
ಘಟನೆ ವಿವರ:
ಜೆಟ್ ಏರ್ವೇಯ್ಸ್ 9W 697 ವಿಮಾನವು ಗುರುವಾರ ಮುಂಬೈಯಿಂದ ಜೈಪುರಕ್ಕೆ ಹೊರಟಿತ್ತು. ಇದರಲ್ಲಿ 166 ಮಂದಿ ಪ್ರಯಾಣಿಕರಿದ್ದರು.
ಈ ವೇಳೆ ವಿಮಾನ ಸಿಬ್ಬಂದಿ ಕ್ಯಾಬಿನ್ ಒತ್ತಡ ನಿರ್ವಹಿಸುವ ಸ್ವಿಚ್ ಹಾಕಲು ಮರೆತಿದ್ದಾರೆ. ಇದರಿಂದ ಆಮ್ಲಜನಕ ಮುಖವಾಡಗಳು ಸಿಗುವಲ್ಲಿ ವಿಳಂಬವಾಗಿದೆ. ಇದರ ಪರಿಣಾಮ 30 ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.
ಈಗಾಗಲೇ ಪರಿಸ್ಥಿತಿ ಸುಧಾರಿಸಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕಿವಿ, ಮೂಗಿನಲ್ಲಿ ರಕ್ತಸೋರಿಕೆಯಾದವರಿಗೆ ಸಿಬ್ಬಂದಿ ಪ್ರಥಮ ಚಿಕಿತ್ಸೆ ಮಾಡಿದ್ದಾರೆ. ತುರ್ತಾಗಿ ತೆರಳಬೇಕಾದ ಪ್ರಯಾಣಿಕರಿಗೆ ಬೇರೊಂದು ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಗಾದದ ಅನಾನುಕೂಲತೆಗೆ ಜೆಟ್ ಏರ್ವೇಯ್ಸ್ ಕ್ಷಮೆಯಾಚಿಸುತ್ತದೆ ಎಂದು ಜೆಟ್ಏರ್ ವೇಯ್ಸ್ ಹೇಳಿಕೆ ಬಿಡುಗಡೆ ಮಾಡಿದೆ.
ಈ ಸಂಬಂಧ ಸತೀಶ್ ನಾಯರ್ ಎಂಬುವರು ಮೂಗಿನಲ್ಲಿ ರಕ್ತಸೋರಿಕೆಯಾದರೂ ವಿಮಾನದ ಸಿಬ್ಬಂದಿ ಸಹಾಯಕ್ಕೆ ಬರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…