ಮುಂಬೈ: ಜೆಟ್ ಏರ್ವೇಯ್ಸ್ ಸಿಬ್ಬಂದಿ ವಿಮಾನದೊಳಗಿನ ತಾಂತ್ರಿಕ ದೋಷದ ಕಾರಣ ಪ್ರಯಾಣಿಕರ ಮೂಗು, ಕಿವಿಯಲ್ಲಿ ರಕ್ತ ಸೋರಿಕೆಯಾಗಿದ್ದು, ಇನ್ನು ಕೆಲವರಿಗೆ ತಲೆನೋವು ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಮುಂಬೈಯಿಂದ ಜೈಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಮುಂಬೈ ವಿಮಾನ ನಿಲ್ದಾಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಹಾಜರಿದ್ದ ಸಿಬ್ಬಂದಿಯ ವಿರುದ್ಧ ವಿಮಾನ ಅಪಘಾತ ತನಿಖಾ ದಳ (ಎಎಐಬಿ) ತನಿಖೆ ಕೈಗೊಂಡಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಉಪನಿರ್ದೇಶಕ ಜನರಲ್ ಲಲಿತ್ ಗುಪ್ತಾ ತಿಳಿಸಿದ್ದಾರೆ.
ಘಟನೆ ವಿವರ:
ಜೆಟ್ ಏರ್ವೇಯ್ಸ್ 9W 697 ವಿಮಾನವು ಗುರುವಾರ ಮುಂಬೈಯಿಂದ ಜೈಪುರಕ್ಕೆ ಹೊರಟಿತ್ತು. ಇದರಲ್ಲಿ 166 ಮಂದಿ ಪ್ರಯಾಣಿಕರಿದ್ದರು.
ಈ ವೇಳೆ ವಿಮಾನ ಸಿಬ್ಬಂದಿ ಕ್ಯಾಬಿನ್ ಒತ್ತಡ ನಿರ್ವಹಿಸುವ ಸ್ವಿಚ್ ಹಾಕಲು ಮರೆತಿದ್ದಾರೆ. ಇದರಿಂದ ಆಮ್ಲಜನಕ ಮುಖವಾಡಗಳು ಸಿಗುವಲ್ಲಿ ವಿಳಂಬವಾಗಿದೆ. ಇದರ ಪರಿಣಾಮ 30 ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.
ಈಗಾಗಲೇ ಪರಿಸ್ಥಿತಿ ಸುಧಾರಿಸಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕಿವಿ, ಮೂಗಿನಲ್ಲಿ ರಕ್ತಸೋರಿಕೆಯಾದವರಿಗೆ ಸಿಬ್ಬಂದಿ ಪ್ರಥಮ ಚಿಕಿತ್ಸೆ ಮಾಡಿದ್ದಾರೆ. ತುರ್ತಾಗಿ ತೆರಳಬೇಕಾದ ಪ್ರಯಾಣಿಕರಿಗೆ ಬೇರೊಂದು ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಗಾದದ ಅನಾನುಕೂಲತೆಗೆ ಜೆಟ್ ಏರ್ವೇಯ್ಸ್ ಕ್ಷಮೆಯಾಚಿಸುತ್ತದೆ ಎಂದು ಜೆಟ್ಏರ್ ವೇಯ್ಸ್ ಹೇಳಿಕೆ ಬಿಡುಗಡೆ ಮಾಡಿದೆ.
ಈ ಸಂಬಂಧ ಸತೀಶ್ ನಾಯರ್ ಎಂಬುವರು ಮೂಗಿನಲ್ಲಿ ರಕ್ತಸೋರಿಕೆಯಾದರೂ ವಿಮಾನದ ಸಿಬ್ಬಂದಿ ಸಹಾಯಕ್ಕೆ ಬರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…