ಬೆಂಗಳೂರು: ಕೋಮುವಾದಿಗಳನ್ನು ಸೋಲಿಸಲು ನಾವು ಸಮರ್ಥರಿದ್ದೇವೆ. ಜೆಡಿಎಸ್ನವರಿಗೆ ಆ ಯೋಚನೆಯಿದ್ದರೆ ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಗೆ ಬೆಂಬಲ ನೀಡುವಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಹ್ವಾನಕ್ಕೆ ತಿರುಗೇಟು ನೀಡಿದ ಅವರು, ಕೋಮುವಾದಿಗಳನ್ನು ಸೋಲಿಸಬೇಕೆಂಬ ಇಚ್ಚೆ ಜೆಡಿಎಸ್ನವರಿಗಿದ್ದರೆ ನಮ್ಮ ಅಭ್ಯರ್ಥಿಯನ್ನು ಅವರು ಬೆಂಬಲಿಸಲಿ. ನಾವಂತೂ ಕೋಮುವಾದಿಗಳನ್ನು ಸೋಲಿಸುತ್ತೇವೆ ಎಂದರು.
ಅಲ್ಪಸಂಖ್ಯಾತ ಅಭ್ಯರ್ಥಿ ಮನ್ಸೂರ್ ಅವರನ್ನು ಎರಡನೇ ಅಭ್ಯರ್ಥಿಯಾಗಿ ಒಂದು ತಿಂಗಳ ಹಿಂದೆಯೇ ನಿರ್ಧರಿಸಿದ್ದೇವೆ. ಜೆಡಿಎಸ್ನವರಿಗೆ ಅಲ್ಪಂಖ್ಯಾತರ ಬಗ್ಗೆ ಕಾಳಜಿಯಿದ್ದರೆ ಮನ್ಸೂರ್ಗೆ ಬೆಂಬಲ ನೀಡಲಿ. ಬಿಜೆಪಿಯವರು ಸಿಎಂ ಆಗಬಾರದು ಎಂಬ ಕಾರಣಕ್ಕಾಗಿ ಈ ಹಿಂದೆ ನಾವು ಕುಮಾರಸ್ವಾಮಿಯವರನ್ನು ಸಿಎಂ ಮಾಡಲಿಲ್ಲವೇ? ದೇವೇಗೌಡರು ಪ್ರಧಾನಿಯಾಗಲು ನಾವೂ ಬೆಂಬಲ ನೀಡಲಿಲ್ಲವೇ ಎಂದು ಅವರು ಪ್ರಶ್ನಿಸಿದರು.
ಯಾವುದೇ ಕಾರಣಕ್ಕೂ ಜೆಡಿಎಸ್ನವರಿಗೆ ನಾವು ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಬೇಕಿದ್ದರೆ ಅವರೇ ನಮಗೆ ಬೆಂಬಲ ನೀಡಿ ನಮ್ಮ ಅಭ್ಯರ್ಥಿ ಪರ ಇರಲಿ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…