ಮೈಸೂರು: ಸಂದೇಶ್ ನಾಗರಾಜ್ ಕುಟುಂಬಕ್ಕೆ ಜೆಡಿಎಸ್ ಯಾವುದೇ ಮೋಸ ಮಾಡಿಲ್ಲ. ಅವರು ಯಾಕೆ ನಮ್ಮ ಪಕ್ಷವನ್ನು ದೂರುತ್ತಿದ್ದಾರೆ ಗೊತ್ತಿಲ್ಲ ಎಂದು ಜೆಡಿಎಸ್ನ ಮಾಜಿ ಸಚಿವ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ಗೆ ಯಾರೂ ಅನಿವಾರ್ಯವಲ್ಲ. ಜೆಡಿಎಸ್ ನಮಗೆ ಅನಿವಾರ್ಯ. ಹಾಗೆಯೇ ನಮಗೇ ಹೆಚ್.ಡಿ ದೇವೆಗೌಡರೇ ಯಾವತ್ತಿದ್ದರೂ ನಾಯಕ. ನೀವು ನೆನಪಿಟ್ಟುಕೊಳ್ಳಿ ಪಕ್ಷದ ಕಾರ್ಯಕರ್ತರ ದುಡಿಮೆಯಿಂದ ನೀವು ಶಾಸಕರಾಗಿರುವುದು. ನಿಮ್ಮ ಅವಧಿ ಮುಗಿಯೋವರೆಗೂ ನೀವು ಪಕ್ಷದ ಪರವಾಗಿ ಇರಿ ಎಂದು ಜಿ.ಟಿ ದೇವೆಗೌಡರಿಗೆ ಸಾರಾ ಮಹೇಶ್ ತಿರುಗೇಟು ಕೊಟ್ಟಿದ್ದಾರೆ.
ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರು ಮತದಾನದಿಂದ ವಂಚಿತರಾಗಿದ್ದಾರೆ ನಿಜ. ಆದರೆ ಕೆಲ ವ್ಯಕ್ತಿಗಳಿಂದ ನಮಗೆ ಗೆಲುವು ಕಷ್ಠ ಆಯಿತು ಎಂಬುವುದು ಸುಳ್ಳು. ಜೆಡಿಎಸ್ ಶಕ್ತಿ ಹಳೆ ಮೈಸೂರು ಭಾಗದಲ್ಲಿ ಇನ್ನೂ ಇದೇ. ಮುಂದಿನ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ದೂರ ಇರಬೇಕೋ ಅಥವಾ ಯಾರ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂಬುವುದು ಹೆಚ್.ಡಿ ದೇವೇಗೌಡ ಮಾಡುತ್ತಾರೆ. ಆದರೆ ಎರಡು ಪಕ್ಷಗಳಿಂದ ದೂರ ಇರಬೇಕು ಎಂಬುವುದು ನನ್ನ ವೈಯುಕ್ತಿಕ ತೀರ್ಮಾನ ಎಂದು ತಿಳಿಸಿದರು.
ವಿಧಾನ ಪರಿಷತ್ನಲ್ಲಿ ಗೆದ್ದ ಅಭ್ಯರ್ಥಿಯು ಜೆಡಿಎಸ್ ವರಿಷ್ಠಿಗೆ ವರದಿ ಕೊಡುತ್ತಾರೆ. ಬಳಿಕ ವರದಿಯ ಅನುಸಾರವಾಗಿ ನಮ್ಮ ಪಕ್ಷದ ಶಾಸಕರಿಂದಲೇ ಆದ ತೊಂದರೆ ಬಗ್ಗೆಯೂ ವಿವರಿಸಿ ಜೆಡಿಎಸ್ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಸಾರಾ ಮಹೇಶ್ ಹೇಳಿದ್ದಾರೆ
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…