Featured

ಜೆಡಿಎಸ್‌ಗೆ ಯಾರೂ ಅನಿವಾರ್ಯವಲ್ಲ, ಜೆಡಿಎಸ್ ನಮಗೆ ಅನಿವಾರ್ಯ : ಸಾರಾ ಮಹೇಶ್ – Vishwanews24

ಜೆಡಿಎಸ್‌ಗೆ ಯಾರೂ ಅನಿವಾರ್ಯವಲ್ಲ. ಜೆಡಿಎಸ್ ನಮಗೆ ಅನಿವಾರ್ಯ : ಸಾರಾ ಮಹೇಶ್ – Vishwanews24

ಮೈಸೂರು: ಸಂದೇಶ್ ನಾಗರಾಜ್ ಕುಟುಂಬಕ್ಕೆ ಜೆಡಿಎಸ್ ಯಾವುದೇ ಮೋಸ ಮಾಡಿಲ್ಲ. ಅವರು ಯಾಕೆ ನಮ್ಮ ಪಕ್ಷವನ್ನು ದೂರುತ್ತಿದ್ದಾರೆ ಗೊತ್ತಿಲ್ಲ ಎಂದು ಜೆಡಿಎಸ್‌ನ ಮಾಜಿ ಸಚಿವ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಯಾರೂ ಅನಿವಾರ್ಯವಲ್ಲ. ಜೆಡಿಎಸ್ ನಮಗೆ ಅನಿವಾರ್ಯ. ಹಾಗೆಯೇ ನಮಗೇ ಹೆಚ್.ಡಿ ದೇವೆಗೌಡರೇ ಯಾವತ್ತಿದ್ದರೂ ನಾಯಕ. ನೀವು ನೆನಪಿಟ್ಟುಕೊಳ್ಳಿ ಪಕ್ಷದ ಕಾರ್ಯಕರ್ತರ ದುಡಿಮೆಯಿಂದ ನೀವು ಶಾಸಕರಾಗಿರುವುದು. ನಿಮ್ಮ ಅವಧಿ ಮುಗಿಯೋವರೆಗೂ ನೀವು ಪಕ್ಷದ ಪರವಾಗಿ ಇರಿ ಎಂದು ಜಿ.ಟಿ ದೇವೆಗೌಡರಿಗೆ ಸಾರಾ ಮಹೇಶ್ ತಿರುಗೇಟು ಕೊಟ್ಟಿದ್ದಾರೆ.

ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರು ಮತದಾನದಿಂದ ವಂಚಿತರಾಗಿದ್ದಾರೆ ನಿಜ. ಆದರೆ ಕೆಲ ವ್ಯಕ್ತಿಗಳಿಂದ ನಮಗೆ ಗೆಲುವು ಕಷ್ಠ ಆಯಿತು ಎಂಬುವುದು ಸುಳ್ಳು. ಜೆಡಿಎಸ್ ಶಕ್ತಿ ಹಳೆ ಮೈಸೂರು ಭಾಗದಲ್ಲಿ ಇನ್ನೂ ಇದೇ. ಮುಂದಿನ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ದೂರ ಇರಬೇಕೋ ಅಥವಾ ಯಾರ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂಬುವುದು ಹೆಚ್.ಡಿ ದೇವೇಗೌಡ ಮಾಡುತ್ತಾರೆ. ಆದರೆ ಎರಡು ಪಕ್ಷಗಳಿಂದ ದೂರ ಇರಬೇಕು ಎಂಬುವುದು ನನ್ನ ವೈಯುಕ್ತಿಕ ತೀರ್ಮಾನ ಎಂದು ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಗೆದ್ದ ಅಭ್ಯರ್ಥಿಯು ಜೆಡಿಎಸ್ ವರಿಷ್ಠಿಗೆ ವರದಿ ಕೊಡುತ್ತಾರೆ. ಬಳಿಕ ವರದಿಯ ಅನುಸಾರವಾಗಿ ನಮ್ಮ ಪಕ್ಷದ ಶಾಸಕರಿಂದಲೇ ಆದ ತೊಂದರೆ ಬಗ್ಗೆಯೂ ವಿವರಿಸಿ ಜೆಡಿಎಸ್ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಸಾರಾ ಮಹೇಶ್ ಹೇಳಿದ್ದಾರೆ

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

6 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago