Featured

ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ ಪ್ರಚಂಡ ಜಯಗಳಿಸಿ ಇತಿಹಾಸದಲ್ಲೇ ಹೊಸ ದಾಖಲೆಯನ್ನು ನಿರ್ಮಿಸುವಲ್ಲಿ ಯಶಸ್ವಿಯಾದ ಸುಮಲತಾ -Vishwanews24

ಮಂಡ್ಯ: ರಾಜಕೀಯ ಜಿದ್ದಾ ಜಿದ್ದಿಗೆ ಹೆಸರಾಗಿರುವ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ ಪ್ರಚಂಡ ಜಯ ದಾಖಲಿಸುವಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಯಶಸ್ವಿಯಾಗಿದ್ದಾರೆ.

ಮೊದಲ‌ 2 ಸುತ್ತುಗಳಲ್ಲಿ ಮೈತ್ರಿ ಅಭ್ಯರ್ಥಿ ಕೆ.ನಿಖಿಲ್‌ ಮುನ್ನಡೆ ಸಾಧಿಸಿದಾಗ ಅವರು ಜೆಡಿಎಸ್‌ ಗೆಲುವಿನ ಕನಸು ಮೂಡಿಸಿತ್ತು. ಆದರೆ, ಅದು ಹೆಚ್ಚು ಕಾಲ ಉಳಿ ಯಲೇ ಇಲ್ಲ.

ಸುಮಲತಾ ಎಬ್ಬಿಸಿದ ಸ್ವಾಭಿಮಾನದ ಅಲೆಯೊಳಗೆ ಜೆಡಿಎಸ್‌ ಮೂಡಿಸಿದ್ದ ಅಭಿವೃದ್ಧಿ ಅಲೆ ಸಂಪೂರ್ಣವಾಗಿ ಕೊಚ್ಚಿಹೋಯಿತು. ಜೆಡಿಎಸ್‌ ಭದ್ರಕೋಟೆಯೊಳಗೆ ಸ್ವಾಭಿಮಾನದ ಕಹಳೆ ಮೊಳಗಿಸುವುದರೊಂದಿಗೆ ಏಕಾಂಗಿಯಾಗಿ ಚುನಾವಣಾ ಹೋರಾಟ ನಡೆಸಿ ಗೆಲುವಿನ ಗುರಿ ಮುಟ್ಟುವುದ ರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲೇ ಹೊಸ ದಾಖಲೆಯನ್ನು ಸುಮಲತಾ ನಿರ್ಮಿಸಿದ್ದಾರೆ.

ಲೋಕಸಭಾ ಇತಿಹಾಸದಲ್ಲೇ ಸುಮಲತಾ ಐತಿಹಾಸಿಕ ಗೆಲುವು ಸಾಧಿಸಿದ್ದು ಲೋಕಸಭೆ ಪ್ರವೇಶಿಸಿದ ಮೊದಲ ಪಕ್ಷೇತರ ಮಹಿಳಾ ಸಂಸದೆ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ. ಇದರೊಂದಿಗೆ 2019ರ ಮಂಡ್ಯ ಲೋಕಸಭಾ ಚುನಾವಣೆ ಹೊಸ ಇತಿಹಾಸವನ್ನು ಹುಟ್ಟುಹಾಕಿದೆ.

ದೇವೇಗೌಡರ ಕುಟುಂಬಕ್ಕೆ ಎರಡನೇ ಕಣ್ಣಾಗಿರುವ ಮಂಡ್ಯ ಕ್ಷೇತ್ರದ ಫ‌ಲಿತಾಂಶ ಜೆಡಿಎಸ್‌ ವರಿಷ್ಠರಿಗೆ ದೊಡ್ಡ ಆಘಾತವನ್ನು ನೀಡಿದೆ. ಪುತ್ರನಿಗೆ ರಾಜಕೀಯ ಭವಿಷ್ಯ ಪಟ್ಟಾಭಿಷೇಕ ಮಾಡುವ ಮುಖ್ಯಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬಹುದಿನದ ಕನಸು ನುಚ್ಚುನೂರಾಗಿದೆ.

Vishwa News 24

Recent Posts

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

32 seconds ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago