ಮಂಡ್ಯ: ರಾಜಕೀಯ ಜಿದ್ದಾ ಜಿದ್ದಿಗೆ ಹೆಸರಾಗಿರುವ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಭೇದಿಸಿ ಪ್ರಚಂಡ ಜಯ ದಾಖಲಿಸುವಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಯಶಸ್ವಿಯಾಗಿದ್ದಾರೆ.
ಮೊದಲ 2 ಸುತ್ತುಗಳಲ್ಲಿ ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಮುನ್ನಡೆ ಸಾಧಿಸಿದಾಗ ಅವರು ಜೆಡಿಎಸ್ ಗೆಲುವಿನ ಕನಸು ಮೂಡಿಸಿತ್ತು. ಆದರೆ, ಅದು ಹೆಚ್ಚು ಕಾಲ ಉಳಿ ಯಲೇ ಇಲ್ಲ.
ಸುಮಲತಾ ಎಬ್ಬಿಸಿದ ಸ್ವಾಭಿಮಾನದ ಅಲೆಯೊಳಗೆ ಜೆಡಿಎಸ್ ಮೂಡಿಸಿದ್ದ ಅಭಿವೃದ್ಧಿ ಅಲೆ ಸಂಪೂರ್ಣವಾಗಿ ಕೊಚ್ಚಿಹೋಯಿತು. ಜೆಡಿಎಸ್ ಭದ್ರಕೋಟೆಯೊಳಗೆ ಸ್ವಾಭಿಮಾನದ ಕಹಳೆ ಮೊಳಗಿಸುವುದರೊಂದಿಗೆ ಏಕಾಂಗಿಯಾಗಿ ಚುನಾವಣಾ ಹೋರಾಟ ನಡೆಸಿ ಗೆಲುವಿನ ಗುರಿ ಮುಟ್ಟುವುದ ರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲೇ ಹೊಸ ದಾಖಲೆಯನ್ನು ಸುಮಲತಾ ನಿರ್ಮಿಸಿದ್ದಾರೆ.
ಲೋಕಸಭಾ ಇತಿಹಾಸದಲ್ಲೇ ಸುಮಲತಾ ಐತಿಹಾಸಿಕ ಗೆಲುವು ಸಾಧಿಸಿದ್ದು ಲೋಕಸಭೆ ಪ್ರವೇಶಿಸಿದ ಮೊದಲ ಪಕ್ಷೇತರ ಮಹಿಳಾ ಸಂಸದೆ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ. ಇದರೊಂದಿಗೆ 2019ರ ಮಂಡ್ಯ ಲೋಕಸಭಾ ಚುನಾವಣೆ ಹೊಸ ಇತಿಹಾಸವನ್ನು ಹುಟ್ಟುಹಾಕಿದೆ.
ದೇವೇಗೌಡರ ಕುಟುಂಬಕ್ಕೆ ಎರಡನೇ ಕಣ್ಣಾಗಿರುವ ಮಂಡ್ಯ ಕ್ಷೇತ್ರದ ಫಲಿತಾಂಶ ಜೆಡಿಎಸ್ ವರಿಷ್ಠರಿಗೆ ದೊಡ್ಡ ಆಘಾತವನ್ನು ನೀಡಿದೆ. ಪುತ್ರನಿಗೆ ರಾಜಕೀಯ ಭವಿಷ್ಯ ಪಟ್ಟಾಭಿಷೇಕ ಮಾಡುವ ಮುಖ್ಯಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಹುದಿನದ ಕನಸು ನುಚ್ಚುನೂರಾಗಿದೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…