Featured

ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ ಪ್ರಚಂಡ ಜಯಗಳಿಸಿ ಇತಿಹಾಸದಲ್ಲೇ ಹೊಸ ದಾಖಲೆಯನ್ನು ನಿರ್ಮಿಸುವಲ್ಲಿ ಯಶಸ್ವಿಯಾದ ಸುಮಲತಾ -Vishwanews24

ಮಂಡ್ಯ: ರಾಜಕೀಯ ಜಿದ್ದಾ ಜಿದ್ದಿಗೆ ಹೆಸರಾಗಿರುವ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆಯನ್ನು ಭೇದಿಸಿ ಪ್ರಚಂಡ ಜಯ ದಾಖಲಿಸುವಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಯಶಸ್ವಿಯಾಗಿದ್ದಾರೆ.

ಮೊದಲ‌ 2 ಸುತ್ತುಗಳಲ್ಲಿ ಮೈತ್ರಿ ಅಭ್ಯರ್ಥಿ ಕೆ.ನಿಖಿಲ್‌ ಮುನ್ನಡೆ ಸಾಧಿಸಿದಾಗ ಅವರು ಜೆಡಿಎಸ್‌ ಗೆಲುವಿನ ಕನಸು ಮೂಡಿಸಿತ್ತು. ಆದರೆ, ಅದು ಹೆಚ್ಚು ಕಾಲ ಉಳಿ ಯಲೇ ಇಲ್ಲ.

ಸುಮಲತಾ ಎಬ್ಬಿಸಿದ ಸ್ವಾಭಿಮಾನದ ಅಲೆಯೊಳಗೆ ಜೆಡಿಎಸ್‌ ಮೂಡಿಸಿದ್ದ ಅಭಿವೃದ್ಧಿ ಅಲೆ ಸಂಪೂರ್ಣವಾಗಿ ಕೊಚ್ಚಿಹೋಯಿತು. ಜೆಡಿಎಸ್‌ ಭದ್ರಕೋಟೆಯೊಳಗೆ ಸ್ವಾಭಿಮಾನದ ಕಹಳೆ ಮೊಳಗಿಸುವುದರೊಂದಿಗೆ ಏಕಾಂಗಿಯಾಗಿ ಚುನಾವಣಾ ಹೋರಾಟ ನಡೆಸಿ ಗೆಲುವಿನ ಗುರಿ ಮುಟ್ಟುವುದ ರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲೇ ಹೊಸ ದಾಖಲೆಯನ್ನು ಸುಮಲತಾ ನಿರ್ಮಿಸಿದ್ದಾರೆ.

ಲೋಕಸಭಾ ಇತಿಹಾಸದಲ್ಲೇ ಸುಮಲತಾ ಐತಿಹಾಸಿಕ ಗೆಲುವು ಸಾಧಿಸಿದ್ದು ಲೋಕಸಭೆ ಪ್ರವೇಶಿಸಿದ ಮೊದಲ ಪಕ್ಷೇತರ ಮಹಿಳಾ ಸಂಸದೆ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ. ಇದರೊಂದಿಗೆ 2019ರ ಮಂಡ್ಯ ಲೋಕಸಭಾ ಚುನಾವಣೆ ಹೊಸ ಇತಿಹಾಸವನ್ನು ಹುಟ್ಟುಹಾಕಿದೆ.

ದೇವೇಗೌಡರ ಕುಟುಂಬಕ್ಕೆ ಎರಡನೇ ಕಣ್ಣಾಗಿರುವ ಮಂಡ್ಯ ಕ್ಷೇತ್ರದ ಫ‌ಲಿತಾಂಶ ಜೆಡಿಎಸ್‌ ವರಿಷ್ಠರಿಗೆ ದೊಡ್ಡ ಆಘಾತವನ್ನು ನೀಡಿದೆ. ಪುತ್ರನಿಗೆ ರಾಜಕೀಯ ಭವಿಷ್ಯ ಪಟ್ಟಾಭಿಷೇಕ ಮಾಡುವ ಮುಖ್ಯಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬಹುದಿನದ ಕನಸು ನುಚ್ಚುನೂರಾಗಿದೆ.

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

4 hours ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

4 hours ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

5 hours ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

5 hours ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

5 hours ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

5 hours ago