ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ’ ಎಂಬ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಅವರ ಹೇಳಿಕೆ ಜೆಡಿಎಸ್ ಪಕ್ಷವು ಬಿಜೆಪಿಯಲ್ಲಿ ವಿಲೀನಗೊಳ್ಳುವುದೇ ಎಂಬ ಚರ್ಚೆಗೆ ನಾಂದಿ ಹಾಡಿದೆ.
ಎಚ್.ಡಿ.ಕುಮಾರಸ್ವಾಮಿ ಅವರು ಈ ಸಾಧ್ಯತೆಯನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಯಾವುದೇ ಪಕ್ಷಗಳ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ನಾನು ಬದುಕಿರುವವರೆಗೂ ಜೆಡಿಎಸ್ ಪಕ್ಷವನ್ನು ಬೇರೆ ಪಕ್ಷದೊಂದಿಗೆ ವಿಲೀನ ಇಲ್ಲ ಎಂದು ಹೇಳಿದರು.
ಕಳೆದ 10 ವರ್ಷಗಳಿಂದ ವಿರೋಧ ಪಕ್ಷದಲ್ಲಿ ಕೆಲಸ ಮಾಡಿದ್ದೇವೆ. ದೇವೇಗೌಡರು ಸಹ 60 ವರ್ಷದ ರಾಜಕಾರಣದಲ್ಲಿ ವೈಯಕ್ತಿಕವಾಗಿ ಹೋರಾಟ ಮಾಡಿ ಜೆಡಿಎಸ್ ಪಕ್ಷವನ್ನು ಕಟ್ಟಿದ್ದಾರೆ. ಅಧಿಕಾರ ಹಿಡಿಯಲು ಬೇರೆ ಪಕ್ಷದ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.
ಇದೇ ವಿಚಾರ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ‘ಜೆಡಿಎಸ್ ಸ್ವಾಭಿಮಾನಿ ಕನ್ನಡಿಗರ ಪಕ್ಷ. ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಬಿಜೆಪಿ ಜತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ’ ಎಂದು ಹೇಳಿದ್ದಾರೆ.
‘ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದರು. ಆ ಬಳಿಕ ನಮ್ಮ ಮನೆ ಬಾಗಿಲಿಗೆ ಬಂದು ಸಮ್ಮಿಶ್ರ ಸರ್ಕಾರ ಮಾಡಿದರು. ಕಾಂಗ್ರೆಸ್ ಆರೋಪಿಸುವಂತೆ ಒಳ ಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆ ಮಾತ್ರ ಸಾಧ್ಯ’ ಎಂದು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…