ಮೈಸೂರು, : ಜೆಡಿಎಸ್ ರಾಜ್ಯಾಧ್ಯಕ್ಷಗಿರಿಯನ್ನೇ ಮಾಡಲಾಗದೆ ರಾಜೀನಾಮೆ ನೀಡಿರುವ ಎಚ್.ವಿಶ್ವನಾಥ್ ನಮ್ಮ ಬಗ್ಗೆ ಏನು ಮಾತನಾಡುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ
ಮೈತ್ರಿ ಸರಕಾರವನ್ನು ಹೊಂದಾಣಿಕೆಯಾಗಿ ಕೊಂಡೊಯ್ಯುವಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂದು ಎಚ್.ವಿಶ್ವನಾಥ್ ಬುಧವಾರ ದಿಲ್ಲಿಯಲ್ಲಿ ನೀಡಿದ್ದ ಹೇಳಿಕೆ ಕುರಿತಂತೆ ಇಂದು ಮಾಧ್ಯಮದವರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.
ಜೆಡಿಎಸ್ ಅಧ್ಯಕ್ಷಗಿರಿಯನ್ನೆ ಮಾಡಲಾಗದವರು ನಮ್ಮ ಬಗ್ಗೆ ಏನು ಮಾತನಾಡುವುದು. ಅಧ್ಯಕ್ಷರಾಗಿ ಎಷ್ಟು ದಿನ ಆಯ್ತು, ಇನ್ನೂ 6 ತಿಂಗಳಾಗಿಲ್ಲ, ಆಗಲೇ ಮೂರು ಬಾರಿ ರಾಜೀನಾಮೆ ನೀಡಿದ್ದಾರೆ. ಇನ್ನು ನಮ್ಮ ಬಗ್ಗೆ ಏನು ಮಾತನಾಡುವುದು ಎಂದು ವ್ಯಂಗ್ಯವಾಡಿದರು.
ಬುಧವಾರ ದೆಹಲಿಯಲ್ಲಿ ಮಾತನಾಡಿದ್ದ ಎಚ್ ವಿಶ್ವನಾಥ್, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದನ್ನು ಟಿವಿಯಲ್ಲಿ ನೋಡಿದ್ದೇನೆ. ಮೈತ್ರಿ ಸರ್ಕಾರ ಪ್ರಯೋಗವಿದ್ದಂತೆ ಅದನ್ನು ನಿಭಾಯಿಸುವುದು ರಾಜಕೀಯ ಚತುರತೆ. ಈ ಪ್ರಯೋಗ ಯಶಸ್ವಿ ಮಾಡಲು ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಯತ್ನ ಮಾಡುತ್ತಿಲ್ಲ. ಮೈತ್ರಿ ನಿಭಾಯಿಸುವಲ್ಲಿ ರಾಜ್ಯ ನಾಯಕರು ವಿಫಲವಾಗಿದ್ದು, ರಾಷ್ಟ್ರ ರಾಜಕಾರಣದ ಮುಂದೆ ರಾಜ್ಯ ನಾಯಕರು ಬೆತ್ತಲಾಗಿದ್ದಾರೆ ಬೇಸರ ವ್ಯಕ್ತಪಡಿಸಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…