Featured

ಜೆಡಿಎಸ್ ಅಧ್ಯಕ್ಷಗಿರಿಯನ್ನೆ ಮಾಡಲಾಗದವರು ನಮ್ಮ ಬಗ್ಗೆ ಏನು ಮಾತನಾಡುವುದು : ಎಚ್.ವಿಶ್ವನಾಥ್ ಗೆ ಸಿದ್ದರಾಮಯ್ಯ

ಮೈಸೂರು, : ಜೆಡಿಎಸ್ ರಾಜ್ಯಾಧ್ಯಕ್ಷಗಿರಿಯನ್ನೇ ಮಾಡಲಾಗದೆ ರಾಜೀನಾಮೆ ನೀಡಿರುವ ಎಚ್.ವಿಶ್ವನಾಥ್ ನಮ್ಮ ಬಗ್ಗೆ ಏನು ಮಾತನಾಡುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ

ಮೈತ್ರಿ ಸರಕಾರವನ್ನು ಹೊಂದಾಣಿಕೆಯಾಗಿ ಕೊಂಡೊಯ್ಯುವಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂದು ಎಚ್.ವಿಶ್ವನಾಥ್ ಬುಧವಾರ ದಿಲ್ಲಿಯಲ್ಲಿ ನೀಡಿದ್ದ ಹೇಳಿಕೆ ಕುರಿತಂತೆ ಇಂದು ಮಾಧ್ಯಮದವರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಜೆಡಿಎಸ್ ಅಧ್ಯಕ್ಷಗಿರಿಯನ್ನೆ ಮಾಡಲಾಗದವರು ನಮ್ಮ ಬಗ್ಗೆ ಏನು ಮಾತನಾಡುವುದು. ಅಧ್ಯಕ್ಷರಾಗಿ ಎಷ್ಟು ದಿನ ಆಯ್ತು, ಇನ್ನೂ 6 ತಿಂಗಳಾಗಿಲ್ಲ, ಆಗಲೇ ಮೂರು ಬಾರಿ ರಾಜೀನಾಮೆ ನೀಡಿದ್ದಾರೆ. ಇನ್ನು ನಮ್ಮ ಬಗ್ಗೆ ಏನು ಮಾತನಾಡುವುದು ಎಂದು ವ್ಯಂಗ್ಯವಾಡಿದರು.

ಬುಧವಾರ ದೆಹಲಿಯಲ್ಲಿ ಮಾತನಾಡಿದ್ದ ಎಚ್ ವಿಶ್ವನಾಥ್, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದನ್ನು ಟಿವಿಯಲ್ಲಿ ನೋಡಿದ್ದೇನೆ. ಮೈತ್ರಿ ಸರ್ಕಾರ ಪ್ರಯೋಗವಿದ್ದಂತೆ ಅದನ್ನು ನಿಭಾಯಿಸುವುದು ರಾಜಕೀಯ ಚತುರತೆ. ಈ ಪ್ರಯೋಗ ಯಶಸ್ವಿ ಮಾಡಲು ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಯತ್ನ ಮಾಡುತ್ತಿಲ್ಲ. ಮೈತ್ರಿ ನಿಭಾಯಿಸುವಲ್ಲಿ ರಾಜ್ಯ ನಾಯಕರು ವಿಫಲವಾಗಿದ್ದು, ರಾಷ್ಟ್ರ ರಾಜಕಾರಣದ ಮುಂದೆ ರಾಜ್ಯ ನಾಯಕರು ಬೆತ್ತಲಾಗಿದ್ದಾರೆ ಬೇಸರ ವ್ಯಕ್ತಪಡಿಸಿದ್ದರು.

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

33 seconds ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

8 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

30 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago