ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿಯವರಿಗೆ ಪಲಿಮಾರು ಶ್ರೀಗಳಿಂದ ಕಿಟ್ ಹಸ್ತಾಂತರ.vishwanews24 video news

ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿಯವರಿಗೆ ಪಲಿಮಾರು ಶ್ರೀಗಳಿಂದ ಕಿಟ್ ಹಸ್ತಾಂತರ.

ಕಾಪು: ಉಡುಪಿ‌ ಜಿಲ್ಲಾ ಜೆಡಿಎಸ್ ನ‌ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿಯವರಿಗೆ ಪಲಿಮಾರು ಹಿರಿಯ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಗಳು ಲಾಕ್-ಡೌನ್ ಸಂತ್ರಸ್ತರಿಗೆ ವಿತರಿಸಲು ಕಿಟ್ ಹಸ್ತಾಂತರ ಕಾರ್ಯಕ್ರಮ ಪಲಿಮಾರು ಮಠದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಶ್ರೀಗಳು ಮಾತಾಡಿ ” ಕೊರೋನಾ ಎಂಬ ಮಹಮಾರಿಯನ್ನು ಸರ್ಕಾರದ ಆದೇಶ ಪಾಲಿಸುವ ಮೂಲಕ‌ ಹತೋಟಿಗೆ ತರಲು ಪ್ರಯತ್ನಿಸಬೇಕು,ಒಂದು ಹೊತ್ತು ಊಟ ನೀಡುವುದರಿಂದ ಒಪ್ಪೊತ್ತಿನ‌ ಹಸಿವು ನೀಗಿಸಬಹುದು ಆದರೆ ಈ ತರಹ ಕಿಟ್ ವಿತರಣೆ ಮಾಡಿದರೆ ಅದು ಕೆಲ ದಿನಗಳ ಊಟಕ್ಕೆ ವ್ಯವಸ್ಥೆ ಆಗುತ್ತದೆ ಮತ್ತು ಯೋಗಿಶ್ ಶೆಟ್ಟಿಯವರಿಗೆ ಕಿಟ್ ವಿತರಿಸಿರುವುದರಿಂದ ಅದು ಅರ್ಹರಿಗೆ ತಲುಪುತ್ತೆ ಎಂದರು.”
ಯೋಗಿಶ್ ಶೆಟ್ಟಿ ಬಾಲಾಜಿ ಮಾತಾಡಿ” ಪಲಿಮಾರು ಶ್ರೀಗಳ ಸಾಮಾಜಿಕ ಸೇವೆಯು ಸಮಾಜದಲ್ಲಿ‌ ಆದರ್ಶಪ್ರಾಯವಾಗಿದೆ ಮತ್ತು ಆಪತ್ಕಾಲದಲ್ಲಿ‌ ಸಮಾಜಕ್ಕೆ ಸ್ಪಂದಿಸುವ ಶ್ರೀಗಳ ಸೇವೆ ಶ್ಲಾಘನೀಯ ಎಂದರು.

ಈ ಹಿಂದೆ ಯೋಗಿಶ್ ಶೆಟ್ಟಿಯವರು ಸುಮಾರು 600 ಕುಟುಂಬಗಳಿಗೆ ವೈಯಕ್ತಿಕ ಕಿಟ್ ವಿತರಣೆ ಮಾಡಿದ್ದರು.

ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉದಯ ಹೆಗ್ಡೆ,ರಾಜ್ಯ ಅಲ್ಪಸಂಖ್ಯಾತ ಕಾರ್ಯದರ್ಶಿ ಇಸ್ಮಾಯಿಲ್ ಪಲಿಮಾರು, ಉಡುಪಿ ಜಿಲ್ಲಾ ‌ಪ್ರಧಾನ ಕಾರ್ಯದರ್ಶಿ ಜಯರಾಮ್ ಆಚಾರ್ಯ, ಶ್ರೀಕಾಂತ್ ಹೆಬ್ರಿ,ಸಮಾಜ ಸೇವಕ ರಘರಾಮ್ ಶೆಟ್ಟಿ ಕೊಪ್ಪಲಂಗಡಿ ಉಪಸ್ಥಿತರಿದ್ದರು

 

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

12 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

12 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

14 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

14 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

14 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

15 hours ago