ಕಾಪು: ಉಡುಪಿ ಜಿಲ್ಲಾ ಜೆಡಿಎಸ್ ನ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿಯವರಿಗೆ ಪಲಿಮಾರು ಹಿರಿಯ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಗಳು ಲಾಕ್-ಡೌನ್ ಸಂತ್ರಸ್ತರಿಗೆ ವಿತರಿಸಲು ಕಿಟ್ ಹಸ್ತಾಂತರ ಕಾರ್ಯಕ್ರಮ ಪಲಿಮಾರು ಮಠದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಶ್ರೀಗಳು ಮಾತಾಡಿ ” ಕೊರೋನಾ ಎಂಬ ಮಹಮಾರಿಯನ್ನು ಸರ್ಕಾರದ ಆದೇಶ ಪಾಲಿಸುವ ಮೂಲಕ ಹತೋಟಿಗೆ ತರಲು ಪ್ರಯತ್ನಿಸಬೇಕು,ಒಂದು ಹೊತ್ತು ಊಟ ನೀಡುವುದರಿಂದ ಒಪ್ಪೊತ್ತಿನ ಹಸಿವು ನೀಗಿಸಬಹುದು ಆದರೆ ಈ ತರಹ ಕಿಟ್ ವಿತರಣೆ ಮಾಡಿದರೆ ಅದು ಕೆಲ ದಿನಗಳ ಊಟಕ್ಕೆ ವ್ಯವಸ್ಥೆ ಆಗುತ್ತದೆ ಮತ್ತು ಯೋಗಿಶ್ ಶೆಟ್ಟಿಯವರಿಗೆ ಕಿಟ್ ವಿತರಿಸಿರುವುದರಿಂದ ಅದು ಅರ್ಹರಿಗೆ ತಲುಪುತ್ತೆ ಎಂದರು.”
ಯೋಗಿಶ್ ಶೆಟ್ಟಿ ಬಾಲಾಜಿ ಮಾತಾಡಿ” ಪಲಿಮಾರು ಶ್ರೀಗಳ ಸಾಮಾಜಿಕ ಸೇವೆಯು ಸಮಾಜದಲ್ಲಿ ಆದರ್ಶಪ್ರಾಯವಾಗಿದೆ ಮತ್ತು ಆಪತ್ಕಾಲದಲ್ಲಿ ಸಮಾಜಕ್ಕೆ ಸ್ಪಂದಿಸುವ ಶ್ರೀಗಳ ಸೇವೆ ಶ್ಲಾಘನೀಯ ಎಂದರು.
ಈ ಹಿಂದೆ ಯೋಗಿಶ್ ಶೆಟ್ಟಿಯವರು ಸುಮಾರು 600 ಕುಟುಂಬಗಳಿಗೆ ವೈಯಕ್ತಿಕ ಕಿಟ್ ವಿತರಣೆ ಮಾಡಿದ್ದರು.
ಈ ಸಂಧರ್ಭದಲ್ಲಿ ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉದಯ ಹೆಗ್ಡೆ,ರಾಜ್ಯ ಅಲ್ಪಸಂಖ್ಯಾತ ಕಾರ್ಯದರ್ಶಿ ಇಸ್ಮಾಯಿಲ್ ಪಲಿಮಾರು, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ್ ಆಚಾರ್ಯ, ಶ್ರೀಕಾಂತ್ ಹೆಬ್ರಿ,ಸಮಾಜ ಸೇವಕ ರಘರಾಮ್ ಶೆಟ್ಟಿ ಕೊಪ್ಪಲಂಗಡಿ ಉಪಸ್ಥಿತರಿದ್ದರು
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…