ಮೈಸೂರು: ಬಿಜೆಪಿ ವಿರುದ್ದ ಬಹಿರಂಗವಾಗಿ ಕಿಡಿಕಾರುತ್ತಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇದೀಗ ಸ್ವಪಕ್ಷದ ವಿರುದ್ದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ , ಅವರ ಮಗ ವಿಜಯೇಂದ್ರ ಹಾಗು ಶ್ರೀನಿವಾಸಪ್ರಸಾದ್ ಅವರು ನನಗೆ ಹಣ ಕೊಡಲು ಬಂದಿದ್ದರು. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಹಣದ ಆಮಿಷ ಒಡ್ಡಿದ್ದರು ಎಂದು ರಾಜಕೀಯವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಎಲ್ಲವನ್ನೂ ಈಗಲೇ ಹೇಳುವುದಿಲ್ಲ ಹೆಚ್ಚಿನ ಮಾಹಿತಿ ಬೇಕಿದ್ದರೆ, “ಬಾಂಬೆ ಡೈರೀಸ್ ” ನೋಡಿ. ಬಾಂಬೆ ಡೈರೀಸ್ ನ ಮೊದಲ ಅಧ್ಯಾಯದಲ್ಲೇ ಈ ವಿಚಾರವಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರನ್ನುಬೇಟಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಕಾಂಗ್ರೆಸ್ ನಾಯಕರನ್ನು ಕದ್ದು ಮುಚ್ಚಿ ಭೇಟಿ ಮಾಡಿಲ್ಲ. ಇದೊಂದು ಸೌಜನ್ಯಯುತ ಭೇಟಿಯಷ್ಟೇ. ನಾನು ಎಂದಾದರೂ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುತ್ತೇನೆಂದು ಹೇಳಿದ್ದೀನಾ? ನನ್ನನ್ನು ಬಿಜೆಪಿಗೆ ಸೇರಲು ಮಧ್ಯಸ್ಥಿಕೆ ವಹಿಸಿದವರು ಇದೇ ಶ್ರೀನಿವಾಸಪ್ರಸಾದ್. ಅವರೊಬ್ಬ ’ಅಲೆಮಾರಿಗಳ ರಾಜ ’ಎಂದು ಕಿಡಿಕಾರಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…