ಮೈಸೂರು: ಬಿಜೆಪಿ ವಿರುದ್ದ ಬಹಿರಂಗವಾಗಿ ಕಿಡಿಕಾರುತ್ತಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇದೀಗ ಸ್ವಪಕ್ಷದ ವಿರುದ್ದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ , ಅವರ ಮಗ ವಿಜಯೇಂದ್ರ ಹಾಗು ಶ್ರೀನಿವಾಸಪ್ರಸಾದ್ ಅವರು ನನಗೆ ಹಣ ಕೊಡಲು ಬಂದಿದ್ದರು. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಹಣದ ಆಮಿಷ ಒಡ್ಡಿದ್ದರು ಎಂದು ರಾಜಕೀಯವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಎಲ್ಲವನ್ನೂ ಈಗಲೇ ಹೇಳುವುದಿಲ್ಲ ಹೆಚ್ಚಿನ ಮಾಹಿತಿ ಬೇಕಿದ್ದರೆ, “ಬಾಂಬೆ ಡೈರೀಸ್ ” ನೋಡಿ. ಬಾಂಬೆ ಡೈರೀಸ್ ನ ಮೊದಲ ಅಧ್ಯಾಯದಲ್ಲೇ ಈ ವಿಚಾರವಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರನ್ನುಬೇಟಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಕಾಂಗ್ರೆಸ್ ನಾಯಕರನ್ನು ಕದ್ದು ಮುಚ್ಚಿ ಭೇಟಿ ಮಾಡಿಲ್ಲ. ಇದೊಂದು ಸೌಜನ್ಯಯುತ ಭೇಟಿಯಷ್ಟೇ. ನಾನು ಎಂದಾದರೂ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುತ್ತೇನೆಂದು ಹೇಳಿದ್ದೀನಾ? ನನ್ನನ್ನು ಬಿಜೆಪಿಗೆ ಸೇರಲು ಮಧ್ಯಸ್ಥಿಕೆ ವಹಿಸಿದವರು ಇದೇ ಶ್ರೀನಿವಾಸಪ್ರಸಾದ್. ಅವರೊಬ್ಬ ’ಅಲೆಮಾರಿಗಳ ರಾಜ ’ಎಂದು ಕಿಡಿಕಾರಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…