ದೊಡ್ಡಬಳ್ಳಾಪುರ: ನನ್ನ ರಾಜಕೀಯ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು, 2018ರ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಮನೆಗೆ ಹೋಗಿ ಬೆಂಬಲ ನೀಡುವಂತೆ ಕೇಳಿದ್ದು. ಇವರೊಂದಿಗಿನ ಹೊಂದಾಣಿಕೆಯಿಂದಾಗಿಯೇ ನಾನು ಸೋಲುವ ಜೊತೆಗೆ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪಮೊಯ್ಲಿ ಹೇಳಿದರು.
ಅವರು ನಗರದ ಬೆಸೆಂಟ್ ಪಾರ್ಕ್ನಲ್ಲಿ ಮಂಗಳವಾರ ಪ್ರಾರಂಭವಾದ “ನವ ಚಿಂತನ” ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇವೇಗೌಡರು ದ್ವೇಷದ ರಾಜಕಾರಣ ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರನ್ನು ಪ್ರಧಾನ ಮಂತ್ರಿಗಳನ್ನಾಗಿ ಮಾಡಿದ ಪಕ್ಷದ ಮುಂಖಡರ ಮೇಲೆಯೇ ದೂರುಗಳನ್ನು ದಾಖಲಿಸಲು ಆರಂಭಿಸಿದರು. ಇದರಿಂದಾಗಿಯೇ ಪ್ರಧಾನ ಮಂತ್ರಿ ಪಟ್ಟ ಕಳೆದುಕೊಂಡಿದ್ದು. ನಮ್ಮ ವಿರೋಧಿಗಳ ವಿರುದ್ದ ದೂರು ದಾಖಲಿಸುವ ಪ್ರವೃತ್ತಿಯನ್ನು ಇಂದಿಗೂ ದೇವೇಗೌಡರು ಬಿಟ್ಟಿಲ್ಲ. ಜೆಡಿಎಸ್ ನಂಬಿಯೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸೋಲು ಕಾಣಲು ಕಾರಣವಾಯಿತು. ಮುಂದಿನ ದಿನಗಳಲ್ಲಿ ಬಿಜೆಪಿಯಷ್ಟೇ ಮುಖ್ಯವಾಗಿ ಜೆಡಿಎಸ್ ಅನ್ನು ಸಹ ವಿರೋಧಿಸಬೇಕು. ತಂದೆ ಮಕ್ಕಳು ಇಬ್ಬರು ನಂಬಿಕೆಗೆ ಅರ್ಹರಲ್ಲ ಎಂದು ದೂರಿದರು.
ಬಿಜೆಪಿ ಮುಖಂಡರು ಒಂದು ವರ್ಗದ ಜನರನ್ನು ಗುರಿಯಾಗಿಸಿಕೊಂಡು ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ದೇಶದ ಕಾನೂನು, ಪೊಲೀಸ್ ವ್ಯವಸ್ಥೆ ಬಗ್ಗೆ ಬಿಜೆಪಿಗೆ ಗೌರವ ಇಲ್ಲದಾಗಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಶಿಬಿರದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಶಾಸಕ ಟಿ.ವೆಂಕಟರಮಣಯ್ಯ, ಶರತ್ ಬಚ್ಚೇಗೌಡ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿಸಂತೆ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…