ದೊಡ್ಡಬಳ್ಳಾಪುರ: ನನ್ನ ರಾಜಕೀಯ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು, 2018ರ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಮನೆಗೆ ಹೋಗಿ ಬೆಂಬಲ ನೀಡುವಂತೆ ಕೇಳಿದ್ದು. ಇವರೊಂದಿಗಿನ ಹೊಂದಾಣಿಕೆಯಿಂದಾಗಿಯೇ ನಾನು ಸೋಲುವ ಜೊತೆಗೆ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪಮೊಯ್ಲಿ ಹೇಳಿದರು.
ಅವರು ನಗರದ ಬೆಸೆಂಟ್ ಪಾರ್ಕ್ನಲ್ಲಿ ಮಂಗಳವಾರ ಪ್ರಾರಂಭವಾದ “ನವ ಚಿಂತನ” ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇವೇಗೌಡರು ದ್ವೇಷದ ರಾಜಕಾರಣ ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರನ್ನು ಪ್ರಧಾನ ಮಂತ್ರಿಗಳನ್ನಾಗಿ ಮಾಡಿದ ಪಕ್ಷದ ಮುಂಖಡರ ಮೇಲೆಯೇ ದೂರುಗಳನ್ನು ದಾಖಲಿಸಲು ಆರಂಭಿಸಿದರು. ಇದರಿಂದಾಗಿಯೇ ಪ್ರಧಾನ ಮಂತ್ರಿ ಪಟ್ಟ ಕಳೆದುಕೊಂಡಿದ್ದು. ನಮ್ಮ ವಿರೋಧಿಗಳ ವಿರುದ್ದ ದೂರು ದಾಖಲಿಸುವ ಪ್ರವೃತ್ತಿಯನ್ನು ಇಂದಿಗೂ ದೇವೇಗೌಡರು ಬಿಟ್ಟಿಲ್ಲ. ಜೆಡಿಎಸ್ ನಂಬಿಯೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸೋಲು ಕಾಣಲು ಕಾರಣವಾಯಿತು. ಮುಂದಿನ ದಿನಗಳಲ್ಲಿ ಬಿಜೆಪಿಯಷ್ಟೇ ಮುಖ್ಯವಾಗಿ ಜೆಡಿಎಸ್ ಅನ್ನು ಸಹ ವಿರೋಧಿಸಬೇಕು. ತಂದೆ ಮಕ್ಕಳು ಇಬ್ಬರು ನಂಬಿಕೆಗೆ ಅರ್ಹರಲ್ಲ ಎಂದು ದೂರಿದರು.
ಬಿಜೆಪಿ ಮುಖಂಡರು ಒಂದು ವರ್ಗದ ಜನರನ್ನು ಗುರಿಯಾಗಿಸಿಕೊಂಡು ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ದೇಶದ ಕಾನೂನು, ಪೊಲೀಸ್ ವ್ಯವಸ್ಥೆ ಬಗ್ಗೆ ಬಿಜೆಪಿಗೆ ಗೌರವ ಇಲ್ಲದಾಗಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಶಿಬಿರದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಶಾಸಕ ಟಿ.ವೆಂಕಟರಮಣಯ್ಯ, ಶರತ್ ಬಚ್ಚೇಗೌಡ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿಸಂತೆ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ.
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…