Featured

ಜೆಡಿಎಸ್ ಪಕ್ಷದ ಬಾಹ್ಯ ಬೆಂಬಲ ಬೇಕಿಲ್ಲ ; ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರ ನಡೆಸಲಿದೆ : ಶೋಭಾ ಕರಂದ್ಲಾಜೆ, -Vishwanews24

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸಲು ಮುಂದಾಗಿದ್ದಾರೆ.

ಜೆಡಿಎಸ್ ಶಾಸಕರು ಬಿಜೆಪಿಗೆ ಬಾಹ್ಯ ಬೆಂಬಲ ನೀಡಬೇಕೆಂದು ಪಕ್ಷದ ನಾಯಕರ ಮೇಲೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಂಸದೆ ಶೋಭಾ ಕರಂದ್ಲಾಜೆ, ಸೋಮವಾರ ಯಡಿಯೂರಪ್ಪ ಬಹುಮತ ಸಾಬೀತುಪಡಿಸಲಿದ್ದಾರೆ. ಸ್ವತಂತ್ರ ಸರ್ಕಾರ ರಚಿಸುವುದು ಬಿಜೆಪಿಯ ಆದ್ಯತೆಯಾಗಿದೆ. ಜೆಡಿಎಸ್ ಪಕ್ಷದ ಬಾಹ್ಯ ಬೆಂಬಲ ಬೇಕಿಲ್ಲ, ಅದರ ಅವಶ್ಯಕತೆಯೂ ಬಿಜೆಪಿಗೆ ಇಲ್ಲ ಎಂದು ತಿಳಿಸಿದ್ದಾರೆ.

“ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರ ನಡೆಸಲಿದೆ. ಅಲ್ಲದೆ, ಸ್ವಾತಂತ್ರ್ಯವಾಗಿ ಸರ್ಕಾರ ಮಾಡಬೇಕು ಅನ್ನೋದು ಭಾರತೀಯ ಜನತಾ ಪಾರ್ಟಿಯ ಇಚ್ಚೆ . ಈಗಾಗಲೇ ಪಕ್ಷದಲ್ಲಿ 105 ಶಾಸಕರಿದ್ದಾರೆ. ಇಬ್ಬರು ಪಕ್ಷೇತರರು ನಮ್ಮನ್ನು ಬೆಂಬಲಿಸಿದ್ದಾರೆ. ಅಲ್ಲದೆ, ಉಳಿದ ಅತೃಪ್ತರ ರಾಜೀನಾಮೆ ಅಂಗೀಕಾರವಾದರೆ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ.

ರಾಜ್ಯದಲ್ಲಿ ಯಾವ ಸಂದರ್ಭದಲ್ಲಿ ಉಪ ಚುನಾವಣೆ ನಡೆದರೂ ಜನ ನಮ್ಮನ್ನು ಬೆಂಬಲಿಸುತ್ತಾರೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಲು ಮತದಾರರು ಅವಕಾಶ ಮಾಡಿಕೊಡುತ್ತಾರೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ 221 ಸಂಖ್ಯಾಬಲವಿದೆ. ಮ್ಯಾಜಿಕ್ ನಂಬರ್ 111 ಆಗಿದ್ದು, 105 ಶಾಸಕರನ್ನು ಹೊಂದಿರುವ ಬಿಜೆಪಿ ಒಬ್ಬರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 106 ಸಂಖ್ಯಾಬಲ ಹೊಂದಿದೆ. ರಾಜಿನಾಮೆ ನೀಡಿರುವ ಶಾಸಕರು ಗೈರು ಹಾಜರಾದರೆ ಬಿಜೆಪಿ ಸುಲಭವಾಗಿ ಬಹುಮತ ಸಾಬೀತುಪಡಿಸಲಿದೆ ಎಂದು ಹೇಳಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

12 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago