ಚಾಮರಾಜನಗರ: ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳಸಿದ್ದು ವರಿಷ್ಠರಾದ ಹೆಚ್.ಡಿ ದೇವೇಗೌಡರು ಹಾಗೂ ಕುಮಾರಸ್ವಾಮಿ. ಇದೀಗ ಅವರು ಜೆಡಿಎಸ್ ಪಕ್ಷನ್ನು ಉಳಿಸಿಲು ನಿಖಿಲ್ಗೆ ಟಿಕೆಟ್ ನೀಡುತ್ತಿದ್ದಾರೆ. ಇದನ್ನು ಕುಟುಂಬ ರಾಜಕೀಯ ಎಂದು ಹೇಳುವ ಅವಶ್ಯಕತೆ ಇಲ್ಲ ಎಂದು ಸಚಿವ ಸಾ.ರಾ.ಮಹೇಶ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಆಗಬೇಕು ಎಂದು ಆಸೆ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಅವರನ್ನು ಮೈತ್ರಿ ಪಕ್ಷದಿಂದ ಕಣಕ್ಕೆ ಇಳಿಸಲಾಗುತ್ತಿದೆ. ನಿಖಿಲ್ ಜೆಡಿಎಸ್ ಪಕ್ಷವನ್ನು ಉಳಿಸುವ ದೃಷ್ಟಿಯಿಂದ ಅವರಿಗೆ ಟಿಕೆಟ್ ನೀಡಲಾಗುತ್ತಿದೆ. ಇದಕ್ಕೆ ಹಾಲಿ ಸಂಸದ ಶಿವರಾಮೇಗೌಡರ ಒಪ್ಪಿಗೆಯೂ ಸಹ ಇದೆ ಎಂದರು.
ಸಾಮಾಜಿಕ ಜಾಲ ತಾಣದಲ್ಲಿ ನಡೆಯುತ್ತಿರುವ ಅಭಿಯಾನ ಕೆಲವರ ಪಿತೂರಿಯಿಂದ ನಡೆಯುತ್ತಿದ್ದು, ಇದರ ಹಿಂದೆ ಯಾರಿದ್ದಾರೆ ಎನ್ನುವುದು ನಮಗೆ ತಿಳಿದಿದೆ ಎಂದರು. ಅಲ್ಲದೇ ಹೆಚ್.ಡಿ ದೇವೇಗೌಡರನ್ನು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಕರೆತರಲು ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…