ಬೆಳಗಾವಿ: ಜೆಡಿಎಸ್ ಪಕ್ಷವನ್ನು ಕಟ್ಟಿ, ಬೆಳೆಸಿದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ನಾನೇ ಹೊರತು ಎಚ್.ಡಿ.ಕುಮಾರಸ್ವಾಮಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಒಂದು ಪಕ್ಷ ಕಟ್ಟಿನೋಡಲಿ ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ನಾನು ಪಕ್ಷ ಕಟ್ಟಿಯೇ ಬೆಳೆದಿದ್ದು. ಜೆಡಿಎಸ್ಗೆ ಆಮೇಲೆ ಬಂದ ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿ, ಮಂತ್ರಿಯಾಗಿದ್ದು ಎಂದು ಗುಡುಗಿದರು.
ನನ್ನ ಬೆಂಬಲದಿಂದ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿಲ್ಲ. ಕಾಂಗ್ರೆಸ್ ಬೆಂಬಲದಿಂದ ಸಿಎಂ ಆಗಿದ್ದರು. ಪಾಪ ಅವರು ಹೇಳುವುದರಲ್ಲಿ ಸತ್ಯವಿದೆ ಎಂದು ನಗುತ್ತಲೇ ಟಾಂಗ್ ಕೊಟ್ಟರು.
ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪನ ಅವರನ್ನು ಸೋಲಿಸಿದ್ದ ನಾನಲ್ಲ. ಮುನಿಯಪ್ಪ ಅವರಿಗೆ ವೋಟ್ ಹಾಕುವುದಿಲ್ಲ ಅಂತ ಜೆಡಿಎಸ್ನ ಶ್ರೀನಿವಾಸಗೌಡ ಹೇಳಿದ್ದರು. ಆಗ ಎಚ್.ಡಿ.ಕುಮಾರಸ್ವಾಮಿ ಎಲ್ಲಿಗೆ ಹೋಗಿದ್ದರು. ಬಿಜೆಪಿಗೆ ಮತ ಹಾಕಿ ಅಂತ ಕುಮಾರಸ್ವಾಮಿ ಹೇಳಿದ್ದರು ಅಂತ ಜೆಡಿಎಸ್ನವರೇ ನಮಗೆ ಹೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಅವರು ಏನು ಉತ್ತರ ಕೊಡುತ್ತಾರೆ ಎಂದು ಕಿಡಿಕಾರಿದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…