ಬೆಳಗಾವಿ: ಜೆಡಿಎಸ್ ಪಕ್ಷವನ್ನು ಕಟ್ಟಿ, ಬೆಳೆಸಿದ್ದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ನಾನೇ ಹೊರತು ಎಚ್.ಡಿ.ಕುಮಾರಸ್ವಾಮಿ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಒಂದು ಪಕ್ಷ ಕಟ್ಟಿನೋಡಲಿ ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ, ನಾನು ಪಕ್ಷ ಕಟ್ಟಿಯೇ ಬೆಳೆದಿದ್ದು. ಜೆಡಿಎಸ್ಗೆ ಆಮೇಲೆ ಬಂದ ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿ, ಮಂತ್ರಿಯಾಗಿದ್ದು ಎಂದು ಗುಡುಗಿದರು.
ನನ್ನ ಬೆಂಬಲದಿಂದ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿಲ್ಲ. ಕಾಂಗ್ರೆಸ್ ಬೆಂಬಲದಿಂದ ಸಿಎಂ ಆಗಿದ್ದರು. ಪಾಪ ಅವರು ಹೇಳುವುದರಲ್ಲಿ ಸತ್ಯವಿದೆ ಎಂದು ನಗುತ್ತಲೇ ಟಾಂಗ್ ಕೊಟ್ಟರು.
ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪನ ಅವರನ್ನು ಸೋಲಿಸಿದ್ದ ನಾನಲ್ಲ. ಮುನಿಯಪ್ಪ ಅವರಿಗೆ ವೋಟ್ ಹಾಕುವುದಿಲ್ಲ ಅಂತ ಜೆಡಿಎಸ್ನ ಶ್ರೀನಿವಾಸಗೌಡ ಹೇಳಿದ್ದರು. ಆಗ ಎಚ್.ಡಿ.ಕುಮಾರಸ್ವಾಮಿ ಎಲ್ಲಿಗೆ ಹೋಗಿದ್ದರು. ಬಿಜೆಪಿಗೆ ಮತ ಹಾಕಿ ಅಂತ ಕುಮಾರಸ್ವಾಮಿ ಹೇಳಿದ್ದರು ಅಂತ ಜೆಡಿಎಸ್ನವರೇ ನಮಗೆ ಹೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಅವರು ಏನು ಉತ್ತರ ಕೊಡುತ್ತಾರೆ ಎಂದು ಕಿಡಿಕಾರಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…