Featured

ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ : ಹೆಚ್.ಡಿ.ದೇವೇಗೌಡ -Vishwanews24

ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ..

ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ..

ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ..

ಹೆಚ್.ಡಿ.ದೇವೇಗೌಡ ಹೇಳಿಕೆ

ಬೆಂಗಳೂರು: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನಮಂತ್ರಿಗಳ ಹೆಚ್.ಡಿ.ದೇವೇಗೌಡರು ಹೇಳಿದರು.

2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ ‘ಜನತಾ ಪರ್ವ 1.0’ ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರ ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ದೇಶಕ್ಕೆ ಗೊತ್ತಿದೆ ಎಂದು ಹೇಳಿದರು.

ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ ಎಂದರು.

ಹೈಟೆಕ್ ಕಾರ್ಯಗಾರ , ಹೊಸತನಕ್ಕೆ ಮುನ್ನುಡಿ

ಇರುವುದು ಒಂದೇ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ಎನ್ನುವ ಘೋಷವಾಕ್ಯ ಹಾಗೂ 2023ಕ್ಕೇ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷ. ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣ್ಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಮಿಷನ್ 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಗುಡುಗಿದರು.

ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇಡೀ ವೇಳೆ ಮಾಜಿ ಶಾಸಕ ವೈಎಸ್ವಿ ದತ್ತ ಅವರು ‘ ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ ‘ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

19 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

19 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

19 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

20 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

21 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

21 hours ago