ಬೆಂಗಳೂರು: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನಮಂತ್ರಿಗಳ ಹೆಚ್.ಡಿ.ದೇವೇಗೌಡರು ಹೇಳಿದರು.
2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ ‘ಜನತಾ ಪರ್ವ 1.0’ ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರ ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ದೇಶಕ್ಕೆ ಗೊತ್ತಿದೆ ಎಂದು ಹೇಳಿದರು.
ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ ಎಂದರು.
ಹೈಟೆಕ್ ಕಾರ್ಯಗಾರ , ಹೊಸತನಕ್ಕೆ ಮುನ್ನುಡಿ
ಇರುವುದು ಒಂದೇ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ಎನ್ನುವ ಘೋಷವಾಕ್ಯ ಹಾಗೂ 2023ಕ್ಕೇ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷ. ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣ್ಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಮಿಷನ್ 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಗುಡುಗಿದರು.
ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇಡೀ ವೇಳೆ ಮಾಜಿ ಶಾಸಕ ವೈಎಸ್ವಿ ದತ್ತ ಅವರು ‘ ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ ‘ ಎಂಬ ವಿಷಯದ ಬಗ್ಗೆ ಮಾತನಾಡಿದರು.
ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…