ಬೆಂಗಳೂರು: ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ. ಕಾಂಗ್ರೆಸ್ನವರು ಈ ಚಾಲೆಂಜ್ ತಗೋತಾರಾ ಎಂದು ಸಿಎಂ ಇಬ್ರಾಹಿಂ ಪ್ರಶ್ನಿಸುತ್ತಾ ಸವಾಲೆಸೆದಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಪರಿಷತ್ ನಲ್ಲಿ ಹೆಚ್ಚು ಸ್ಥಾನ ಇದ್ದರೂ ಮುಸ್ಲಿಮರಿಗೆ ಯಾಕೆ ವಿಪಕ್ಷ ಸ್ಥಾನ ಕೊಟ್ಟಿಲ್ಲ. ಎರಡನೇ ಅಭ್ಯರ್ಥಿ ಯಾಕೆ ಕಾಂಗ್ರೆಸ್ ಹಾಕಿದ್ದಾರೆ ಅಂತ ಬಂದು ಪ್ರಮಾಣ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲೆಸೆದರು.
ಜೆಡಿಎಸ್ ಅಭ್ಯರ್ಥಿಯನ್ನ ಸೋಲಿಸಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸೋಕೆ ಕಾಂಗ್ರೆಸ್ ಅಭ್ಯರ್ಥಿ ಹಾಕಿದೆ. ಜೆಡಿಎಸ್ 2023 ಕ್ಕೆ ಬರೊಲ್ಲ ಅಂತ ಕಾಂಗ್ರೆಸ್ ಅವರು ಚಾಲೆಂಜ್ ತಗೋತಾರಾ ಎಂದು ಪ್ರಶ್ನಿಸಿದರು. ಎರಡು ಪಕ್ಷಗಳಿಗಿಂತ ಹೆಚ್ಚು ಸ್ಥಾನ ನಾವು ಪಡೆಯುತ್ತೇವೆ. ಇಲ್ಲದೆ ಹೋದರೆ ನಾನು ರಾಜೀನಾಮೆ ನಿವೃತ್ತಿ ಪಡೆಯುತ್ತೇನೆ. ಕಾಂಗ್ರೆಸ್ ಈ ಚಾಲೆಂಜ್ ತೆಗೆದುಕೊಳ್ಳಲಿ ಎಂದು ಹೇಳಿದರು.
ಲೆಹರ್ ಸಿಂಗ್ ಜೊತೆ ಸಿದ್ದರಾಮಯ್ಯ ಡೀಲ್ ಮಾಡಿಕೊಂಡಿದ್ದಾರೆ. ಲೆಹರ್ ಸಿಂಗ್ ಬಿಜೆಪಿ ಅಭ್ಯರ್ಥಿ ಅಲ್ಲ, ಯಡಿಯೂರಪ್ಪ ಅಭ್ಯರ್ಥಿ. ಯಡಿಯೂರಪ್ಪ ಸಿಎಂ ಆಗೋಕೆ ಯಾರು ಕಾರಣ ಎಂದು ಸಿದ್ದರಾಮಯ್ಯ ವಿರುದ್ದ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…