ಬೆಂಗಳೂರು: ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ. ಕಾಂಗ್ರೆಸ್ನವರು ಈ ಚಾಲೆಂಜ್ ತಗೋತಾರಾ ಎಂದು ಸಿಎಂ ಇಬ್ರಾಹಿಂ ಪ್ರಶ್ನಿಸುತ್ತಾ ಸವಾಲೆಸೆದಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಪರಿಷತ್ ನಲ್ಲಿ ಹೆಚ್ಚು ಸ್ಥಾನ ಇದ್ದರೂ ಮುಸ್ಲಿಮರಿಗೆ ಯಾಕೆ ವಿಪಕ್ಷ ಸ್ಥಾನ ಕೊಟ್ಟಿಲ್ಲ. ಎರಡನೇ ಅಭ್ಯರ್ಥಿ ಯಾಕೆ ಕಾಂಗ್ರೆಸ್ ಹಾಕಿದ್ದಾರೆ ಅಂತ ಬಂದು ಪ್ರಮಾಣ ಮಾಡಿ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲೆಸೆದರು.
ಜೆಡಿಎಸ್ ಅಭ್ಯರ್ಥಿಯನ್ನ ಸೋಲಿಸಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸೋಕೆ ಕಾಂಗ್ರೆಸ್ ಅಭ್ಯರ್ಥಿ ಹಾಕಿದೆ. ಜೆಡಿಎಸ್ 2023 ಕ್ಕೆ ಬರೊಲ್ಲ ಅಂತ ಕಾಂಗ್ರೆಸ್ ಅವರು ಚಾಲೆಂಜ್ ತಗೋತಾರಾ ಎಂದು ಪ್ರಶ್ನಿಸಿದರು. ಎರಡು ಪಕ್ಷಗಳಿಗಿಂತ ಹೆಚ್ಚು ಸ್ಥಾನ ನಾವು ಪಡೆಯುತ್ತೇವೆ. ಇಲ್ಲದೆ ಹೋದರೆ ನಾನು ರಾಜೀನಾಮೆ ನಿವೃತ್ತಿ ಪಡೆಯುತ್ತೇನೆ. ಕಾಂಗ್ರೆಸ್ ಈ ಚಾಲೆಂಜ್ ತೆಗೆದುಕೊಳ್ಳಲಿ ಎಂದು ಹೇಳಿದರು.
ಲೆಹರ್ ಸಿಂಗ್ ಜೊತೆ ಸಿದ್ದರಾಮಯ್ಯ ಡೀಲ್ ಮಾಡಿಕೊಂಡಿದ್ದಾರೆ. ಲೆಹರ್ ಸಿಂಗ್ ಬಿಜೆಪಿ ಅಭ್ಯರ್ಥಿ ಅಲ್ಲ, ಯಡಿಯೂರಪ್ಪ ಅಭ್ಯರ್ಥಿ. ಯಡಿಯೂರಪ್ಪ ಸಿಎಂ ಆಗೋಕೆ ಯಾರು ಕಾರಣ ಎಂದು ಸಿದ್ದರಾಮಯ್ಯ ವಿರುದ್ದ ಇಬ್ರಾಹಿಂ ವಾಗ್ದಾಳಿ ನಡೆಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…