ಬೆಂಗಳೂರು: ಪ್ರಾದೇಶಿಕ ಪಕ್ಷದ ಬಗ್ಗೆ ಲಘುವಾಗಿ ಮಾತನಾಡ್ತಾರೆ. ದೇವೇಗೌಡರು ಹೋದರೆ ಜೆಡಿಎಸ್ ಪಕ್ಷ ಹೋಗುತ್ತದೆ ಎಂದು ವ್ಯಂಗ್ಯ ಮಾಡ್ತಾರೆ. ಯಾಕ್ ಹೋಗುತ್ತೆ. ಈ ಪಕ್ಷ ಉಳಿಸುವ ಶಕ್ತಿ ಕಾರ್ಯಕರ್ತರಿಗೆ ಇದೆ. ಆ ಶಕ್ತಿಯನ್ನು ಹೆಚ್ಚು ಮಾಡುವ ಕೆಲಸ ನಾವು ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಲಘುವಾಗಿ ಮಾತನಾಡುವವರ ಬಗ್ಗೆ ನಾನು ಮಾತನಾಡುವುದಿಲ್ಲ. ನನ್ನ ಪಕ್ಷವನ್ನು ಹೇಗೆ ತರುವುದು ನನಗೆ ಗೊತ್ತಿದೆ. ಕಾಲು ನೋವು ಇದೆ ಎಂದು ಹೆದರಬೇಡಿ. ಪ್ರತಿ ಜಿಲ್ಲೆಗಳಿಗೆ ಹೋಗ್ತಿನಿ, ಯಾರು ಪಕ್ಷದ ಸದಸ್ಯತ್ವ ತೆಗೆದುಕೊಳ್ಳುವುದಿಲ್ಲವೋ ಅವರಿಗೆ ನಾನು ಬಿ ಫಾರ್ಮ್ ಕೊಡುವುದಿಲ್ಲ ಎಂದರು.
ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುತ್ತೇವೆ. ಅವರು ಎಷ್ಟಾದರೂ ಮತ ಪಡೆಯಲಿ. ಮುಂದೆ ಅವರೇ ಕ್ಷೇತ್ರದಲ್ಲಿ ಬೆಳೆಯುತ್ತಾರೆ. ಹೀಗಾಗಿ ಮಹಿಳೆಯರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ. ನಾನು ಟಿಕೆಟ್ ನೀಡುತ್ತೇನೆ. ಹಣವಿಲ್ಲ ಎಂದು ಸುಮ್ಮನೆ ಹಿಂಜರಿಕೆ ಬೇಡ ಎಂದು ಹೇಳಿದರು.
ಜೆಡಿಎಸ್ಗೆ ಶಕ್ತಿ ತುಂಬಬೇಕು ಎಂದು ಕುಮಾರಸ್ವಾಮಿ ಹಾಗೂ ಪಕ್ಷದ ಅಧ್ಯಕ್ಷರು ಪಕ್ಷ ಸಂಘಟನೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪಕ್ಷದ ಶಾಸಕರು ಎಷ್ಟು ಶ್ರಮಪಡುತ್ತಿದ್ದಾರೆ ಎಂಬುದನ್ನು ನಾನು ಗಮನಿಸಿದ್ದೇನೆ. ಪಕ್ಷಕ್ಕೆ ನಾವು ಹೇಗೆ ಸಂಘಟನೆ ದೃಷ್ಟಿಯಿಂದ ಹೋರಾಟ ಮಾಡ್ಬೇಕು ಎಂದು ಯೋಚನೆ ಮಾಡಿ ಬೆಂಗಳೂರು ಮಹಿಳಾ ಸಮಾವೇಶ ಮಾಡಲು ಸೂಚನೆ ಕೊಟ್ಟಿದ್ದೆ. ನಮ್ಮಲ್ಲಿ ಹೆಣ್ಣು ಮಕ್ಕಳಿದ್ದಾರೆ. ಪಕ್ಷ ಸಂಘಟನೆ ಮಾಡಲು ಮುಂದಾಗಿದ್ದಾರೆ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…