Featured

ಜೆಡಿಎಸ್ ಪಕ್ಷ ಉಳಿಸುವ ಶಕ್ತಿ ಕಾರ್ಯಕರ್ತರಿಗೆ ಇದೆ : ಎಚ್‌ಡಿ ದೇವೇಗೌಡ -Vishwanews24

ಜೆಡಿಎಸ್ ಪಕ್ಷ ಉಳಿಸುವ ಶಕ್ತಿ ಕಾರ್ಯಕರ್ತರಿಗೆ ಇದೆ ..

ನನ್ನ ಪಕ್ಷವನ್ನು ಹೇಗೆ ತರುವುದು ನನಗೆ ಗೊತ್ತಿದೆ..

ನಮ್ಮಲ್ಲಿ ಹೆಣ್ಣು ಮಕ್ಕಳು ಪಕ್ಷ ಸಂಘಟನೆ ಮಾಡಲು ಮುಂದಾಗಿದ್ದಾರೆ..

ಬೆಂಗಳೂರು: ಪ್ರಾದೇಶಿಕ ಪಕ್ಷದ ಬಗ್ಗೆ ಲಘುವಾಗಿ ಮಾತನಾಡ್ತಾರೆ. ದೇವೇಗೌಡರು ಹೋದರೆ ಜೆಡಿಎಸ್‌ ಪಕ್ಷ ಹೋಗುತ್ತದೆ ಎಂದು ವ್ಯಂಗ್ಯ ಮಾಡ್ತಾರೆ. ಯಾಕ್‌ ಹೋಗುತ್ತೆ. ಈ ಪಕ್ಷ ಉಳಿಸುವ ಶಕ್ತಿ ಕಾರ್ಯಕರ್ತರಿಗೆ ಇದೆ. ಆ ಶಕ್ತಿಯನ್ನು ಹೆಚ್ಚು ಮಾಡುವ ಕೆಲಸ ನಾವು ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಆಯೋಜಿಸಿದ್ದ ಜೆಡಿಎಸ್‌ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಲಘುವಾಗಿ ಮಾತನಾಡುವವರ ಬಗ್ಗೆ ನಾನು ಮಾತನಾಡುವುದಿಲ್ಲ. ನನ್ನ ಪಕ್ಷವನ್ನು ಹೇಗೆ ತರುವುದು ನನಗೆ ಗೊತ್ತಿದೆ. ಕಾಲು ನೋವು ಇದೆ ಎಂದು ಹೆದರಬೇಡಿ. ಪ್ರತಿ ಜಿಲ್ಲೆಗಳಿಗೆ ಹೋಗ್ತಿನಿ, ಯಾರು ಪಕ್ಷದ ಸದಸ್ಯತ್ವ ತೆಗೆದುಕೊಳ್ಳುವುದಿಲ್ಲವೋ ಅವರಿಗೆ ನಾನು ಬಿ ಫಾರ್ಮ್ ಕೊಡುವುದಿಲ್ಲ ಎಂದರು.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 9 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುತ್ತೇವೆ. ಅವರು ಎಷ್ಟಾದರೂ ಮತ ಪಡೆಯಲಿ. ಮುಂದೆ ಅವರೇ ಕ್ಷೇತ್ರದಲ್ಲಿ ಬೆಳೆಯುತ್ತಾರೆ. ಹೀಗಾಗಿ ಮಹಿಳೆಯರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ. ನಾನು ಟಿಕೆಟ್ ನೀಡುತ್ತೇನೆ. ಹಣವಿಲ್ಲ‌ ಎಂದು ಸುಮ್ಮನೆ ಹಿಂಜರಿಕೆ ಬೇಡ ಎಂದು ಹೇಳಿದರು.

ಜೆಡಿಎಸ್‌ಗೆ ಶಕ್ತಿ ತುಂಬಬೇಕು ಎಂದು ಕುಮಾರಸ್ವಾಮಿ ಹಾಗೂ ಪಕ್ಷದ ಅಧ್ಯಕ್ಷರು ಪಕ್ಷ ಸಂಘಟನೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಪಕ್ಷದ ಶಾಸಕರು ಎಷ್ಟು ಶ್ರಮಪಡುತ್ತಿದ್ದಾರೆ ಎಂಬುದನ್ನು ನಾನು ಗಮನಿಸಿದ್ದೇನೆ. ಪಕ್ಷಕ್ಕೆ ನಾವು ಹೇಗೆ ಸಂಘಟನೆ ದೃಷ್ಟಿಯಿಂದ ಹೋರಾಟ ಮಾಡ್ಬೇಕು ಎಂದು ಯೋಚನೆ ಮಾಡಿ ಬೆಂಗಳೂರು ಮಹಿಳಾ ಸಮಾವೇಶ ಮಾಡಲು ಸೂಚನೆ ಕೊಟ್ಟಿದ್ದೆ. ನಮ್ಮಲ್ಲಿ ಹೆಣ್ಣು ಮಕ್ಕಳಿದ್ದಾರೆ. ಪಕ್ಷ ಸಂಘಟನೆ ಮಾಡಲು ಮುಂದಾಗಿದ್ದಾರೆ ಎಂದರು.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

21 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

36 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago