ಬೆಂಗಳೂರು: ನಟ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಭರ್ಜರಿಯಾಗಿಯೇ ಆಚರಿಸಿದ್ದು, ಬರೋಬ್ಬರಿ 100 ಕೆ.ಜಿ. ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ.
ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳಿಂದ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. ಬಳಿಕ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಎಂದರೆ ರೈತರ ಪಕ್ಷ, ಮುಂದಿನ ದಿನಗಳಲ್ಲಿ ಜೆಡಿಎಸ್ ಅಂದ್ರೆ ಯುವಕರ ಪಕ್ಷವೂ ಆಗಲಿದೆ. ನಾವೆಲ್ಲ ಸಮಾಜದ ಏಳಿಗೆಗಾಗಿ ಜೊತೆಯಾಗಿ ದುಡೊಯೋಣ. ಕೊರೊನಾ ಸಂಕಷ್ಟ ಕಾಲದಲ್ಲಿ ಹುಟ್ಟು ಹಬ್ಬ ಆಚರಣೆ ಬೇಡ ಎಂದುಕೊಂಡಿದ್ದೆ. ಆದರೆ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹುಟ್ಟುಹಬ್ಬ ಆಚರಣೆಗೆ ಇಲ್ಲಿ ಸೇರಿದ್ದೀರಿ. ನೀವೆಲ್ಲ ಸುರಕ್ಷಿತವಾಗಿ ಮನೆ ತಲುಪಬೇಕು, ಆಗಲೇ ನನಗೆ ನೆಮ್ಮದಿ. ರಾಜ್ಯದ ಮೂಲೆ ಮೂಲೆಗಳಿಂದ ಅನೇಕ ಯುವಕರು ಬಂದಿದ್ದಾರೆ, ಎಲ್ಲರಿಗೂ ಧನ್ಯವಾದಗಳು ಎಂದರು.
ಸಾವಿರಾರು ಅಭಿಮಾನಿಗಳು ನಿಖಿಲ್ ಕುಮಾರಸ್ವಾಮಿಯವರಿಂದ 100 ಕೆಜಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಹುಟ್ಟುಹಬ್ಬ ಹಿನ್ನೆಲೆ ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಲಾಗಿತ್ತು. ಅಭಿಮಾನಿಗಳಿಗೆ ಊಟ ವ್ಯವಸ್ಥೆಯನ್ನು ಸಹ ನಿಖಿಲ್ ಸೈನ್ಯ ಸಮಿತಿ ಮಾಡಿತ್ತು
ಪಡುಬಿದ್ರಿ : ಗಾಂಜಾ ಸೇವನೆ ಪ್ರಕರಣ ; ಯುವಕ ಪೊಲೀಸರ ವಶಕ್ಕೆ -Vishwanews24
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…
ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…
ಗ್ಯಾಸ್ ಏಜೆನ್ಸಿಗಳಿಂದ ಎಲ್ಪಿಜಿ ಪೂರೈಕೆ: ನೆಟ್ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್ವರ್ಕ್…
ಕಟಪಾಡಿ: ಮಟ್ಟು ಬೀಚ್ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…
ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…