ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, ಮತದಾರನ್ನ ಸೆಳೆಯಲು ನಾನಾ ತಂತ್ರಗಾರಿಗೆ ಹೆಣೆಯುತ್ತಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಕಾರ್ಯಕ್ರಮ ನಡೆಸಿದ್ದಾರೆ. ಮಂಡ್ಯಕ್ಕೆ ಬರುತ್ತಿದ್ದಂತೆ ಅದ್ಧೂರಿ ರೋಡ್ ಶೋ ನಡೆಸಿದ ಯುಪಿ ಸಿಎಂ, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿ ಮಂಡ್ಯ ಜನರ ಮನಗೆದ್ದಿದ್ದಾರೆ.
ಮಂಡ್ಯದಲ್ಲಿಂದು ನಡೆದ ವೇದಿಕೆ ಕಾರ್ಯಕ್ರಮದಲ್ಲಿ `ಸಕ್ಕರೆಯ ನಾಡು ಮಂಡ್ಯದ ಜನತೆಗೆ ನನ್ನ ನಮಸ್ಕಾರಗಳು, ಆದಿಚುಂಚನಗಿರಿ ಮಠಕ್ಕೆ ನನ್ನ ಭಕ್ತಿ ಪೂರ್ವಕ ನಮಸ್ಕಾರಗಳು’ ಎಂದು ವಿನಮ್ರವಾಗಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರ ಬಾಯಲ್ಲಿ ಕನ್ನಡ ನುಡಿ ಕೇಳಿ ಮಂಡ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಯ ಭಾರತ ಜನನಿಯ ತನುಜಾತೆ.. ಜಯಹೇ ಕರ್ನಾಟಕ ಮಾತೆ ಎಂದು ಕುವೆಂಪು ಅವರ ನಾಡಗೀತೆಯನ್ನು ಯೋಗಿ ಹಾಡಿದರು. ಅಲ್ಲದೇ, ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲ ಈ ಬಾರಿ ಗೆಲ್ಲಿಸಬೇಕು ಎಂದು ಕನ್ನಡದಲ್ಲೇ ನಾಡಿನ ಜನತೆಗೆ ಮನವಿ ಮಾಡಿದರು.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…