ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, ಮತದಾರನ್ನ ಸೆಳೆಯಲು ನಾನಾ ತಂತ್ರಗಾರಿಗೆ ಹೆಣೆಯುತ್ತಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಕಾರ್ಯಕ್ರಮ ನಡೆಸಿದ್ದಾರೆ. ಮಂಡ್ಯಕ್ಕೆ ಬರುತ್ತಿದ್ದಂತೆ ಅದ್ಧೂರಿ ರೋಡ್ ಶೋ ನಡೆಸಿದ ಯುಪಿ ಸಿಎಂ, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿ ಮಂಡ್ಯ ಜನರ ಮನಗೆದ್ದಿದ್ದಾರೆ.
ಮಂಡ್ಯದಲ್ಲಿಂದು ನಡೆದ ವೇದಿಕೆ ಕಾರ್ಯಕ್ರಮದಲ್ಲಿ `ಸಕ್ಕರೆಯ ನಾಡು ಮಂಡ್ಯದ ಜನತೆಗೆ ನನ್ನ ನಮಸ್ಕಾರಗಳು, ಆದಿಚುಂಚನಗಿರಿ ಮಠಕ್ಕೆ ನನ್ನ ಭಕ್ತಿ ಪೂರ್ವಕ ನಮಸ್ಕಾರಗಳು’ ಎಂದು ವಿನಮ್ರವಾಗಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರ ಬಾಯಲ್ಲಿ ಕನ್ನಡ ನುಡಿ ಕೇಳಿ ಮಂಡ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಯ ಭಾರತ ಜನನಿಯ ತನುಜಾತೆ.. ಜಯಹೇ ಕರ್ನಾಟಕ ಮಾತೆ ಎಂದು ಕುವೆಂಪು ಅವರ ನಾಡಗೀತೆಯನ್ನು ಯೋಗಿ ಹಾಡಿದರು. ಅಲ್ಲದೇ, ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲ ಈ ಬಾರಿ ಗೆಲ್ಲಿಸಬೇಕು ಎಂದು ಕನ್ನಡದಲ್ಲೇ ನಾಡಿನ ಜನತೆಗೆ ಮನವಿ ಮಾಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…