Featured

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ : ಸಿದ್ದರಾಮಯ್ಯಗೆ  ಹೆಚ್ ಡಿಕೆ – VIshwanews24

ಬಣ್ಣ ಬದಲಿಸುವ ಊಸರವಳ್ಳಿ, ಗೊಬೆಲಪ್ಪ,ಬ್ರೋಕರಪ್ಪ ಸಿದ್ದರಾಮಯ್ಯಗೆ  ಚಿತ್ರವಿಚಿತ್ರ ಹೆಸರುಗಳಿಂದ ಟಾಂಗ್ ನೀಡಿದ ಹೆಚ್ ಡಿಕೆ – Vishwanews24

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ…

ಬೆಂಗಳೂರು: ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ಸಿಡಿದೆದ್ದಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಸಿದ್ದು ವಿರುದ್ದ ಹರಿಹಾಯ್ದು ” ಬಣ್ಣ ಬದಲಿಸುವ ಊಸರವಳ್ಳಿ, ಗೊಬೆಲಪ್ಪ,ಬ್ರೋಕರಪ್ಪ ಎಂದು ಚಿತ್ರವಿಚಿತ್ರ ಹೆಸರುಗಳಿಂದ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ “ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ ಎಂದು ಹರಿಹಾಯ್ದಿದ್ದಾರೆ.

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ.ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ ಎಂದು ಎಚ್ಚರಿಕೆ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago