ಬೆಂಗಳೂರು: ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ಸಿಡಿದೆದ್ದಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಸಿದ್ದು ವಿರುದ್ದ ಹರಿಹಾಯ್ದು ” ಬಣ್ಣ ಬದಲಿಸುವ ಊಸರವಳ್ಳಿ, ಗೊಬೆಲಪ್ಪ,ಬ್ರೋಕರಪ್ಪ ಎಂದು ಚಿತ್ರವಿಚಿತ್ರ ಹೆಸರುಗಳಿಂದ ಟಾಂಗ್ ನೀಡಿದ್ದಾರೆ.
ಈ ಬಗ್ಗೆ ತಮ್ಮ ಅಧಿಕೃತ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ “ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ ಎಂದು ಹರಿಹಾಯ್ದಿದ್ದಾರೆ.
ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ.ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ
ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ ಎಂದು ಎಚ್ಚರಿಕೆ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…